ಭೇರ್ಯ: ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರ ಹರದನಹಳ್ಳಿ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕಾಗಿ ಕೈಗೊಂಡಿರುವ ಸಿದ್ಧತೆಯನ್ನು ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶಿವಶಂಕರ್ ಪರಿಶೀಲಿಸಿದರು. ಹರದನಹಳ್ಳಿಗೆ ಬುಧವಾರ ಭೇಟಿ ನೀಡಿದ್ದ ಅವರು, ಸಚಿವರ ವಾಸ್ತವ್ಯಕ್ಕಾಗಿ ಅಂದು ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಧಿಕಾರಿಗಳ ವಾಸ್ತವ್ಯ ಹಾಗೂ ಊಟೋಪಚಾರ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಅಲ್ಲದೆ ಹರದನಹಳ್ಳಿ ಹಾಗು ಈ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪರಿಹರಿಸಿರುವ ಸಮಸ್ಯೆಗಳು ಹಾಗು ಪರಿಹರಿಸಬೇಕಾದ ಸಮಸ್ಯೆಗಳ ಕುರಿತು ಪಟ್ಟಿ…
ಮೈಸೂರು ರೇಸ್ಕೋರ್ಸ್ಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಪರಿಶೀಲನೆ
July 2, 2018ಅವ್ಯವಸ್ಥೆ ಕಂಡು ಕೆಂಡಾಮಂಡಲವಾದ ಸಚಿವರು ನಗರ ಪಾಲಿಕೆ ಅಧಿಕಾರಿಗೆ ತರಾಟೆ ಮೈಸೂರು: ಮೈಸೂರಿನ ರೇಸ್ ಕೋರ್ಸ್ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವು ಮಾಡಿ ಸ್ವಚ್ಛತೆ ಕಾಪಾಡುವುದಕ್ಕೆ ಮೂರು ತಿಂಗಳ ಗಡುವು ನೀಡಲಾಗಿದ್ದು, ಗಡುವು ಉಲ್ಲಂಘಿಸಿದರೆ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಸಿದ್ದಾರೆ. ಭಾನುವಾರ ಬೆಳಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರೇಸ್ಕೋರ್ಸ್ಗೆ ಭೇಟಿ ನೀಡಿದ ಸಚಿವರು, ಅಕ್ರಮವಾಗಿ ನಿರ್ಮಿಸಿರುವ ಕುದುರೆ ಸಾಕಾಣಿಕೆಯ ಲಾಯದ ಕಟ್ಟಡ ಹಾಗೂ ರೇಸ್ಕೋರ್ಸ್ ಆವರಣದಲ್ಲಿರುವ ಅನೈರ್ಮಲ್ಯ ಕಂಡು ವಿಷಾದಿಸಿದರಲ್ಲದೆ, ಪಾಲಿಕೆಯ…
ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಯೋಗ ತರಬೇತಿ ಕೇಂದ್ರ ಸ್ಥಾಪನೆ: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿವರಣೆ
June 22, 2018ಮೈಸೂರು: ಭಾರತೀಯ ಪರಂಪರೆ ಹಾಗೂ ಸಂಸ್ಕøತಿಯ ಧ್ಯೋತಕವಾದ ಯೋಗವನ್ನು ಎಲ್ಲೆಡೆ ಪಸರಿಸುವುದಕ್ಕಾಗಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರಿನ ರೇಸ್ಕೋರ್ಸ್ ಆವರಣದಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರದಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸುಧಾರಿಸುವುದಕ್ಕಾಗಿ ಜೂ.21ರಂದು ವಿಶ್ವ ಯೋಗ ದಿನವೆಂದು ಆಚರಿಸುವುದಕ್ಕೆ ಶ್ರಮಿಸಿದ್ದಾರೆ. ಭಾರತೀಯ ಪರಂಪರೆ ಹಾಗೂ ಸಂಸ್ಕøತಿಯ ಪ್ರತೀಕವೂ…
30 ಕೋಟಿ ರೂ.ವೆಚ್ಚದಲ್ಲಿ ಬೇಲೂರು-ಹಳೇಬೀಡು ಅಭಿವೃದ್ಧಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮಾಹಿತಿ
June 19, 2018ಬೇಲೂರು: ವಿಶ್ವದಲ್ಲೇ ಶಿಲ್ಪ ಕಲೆಗೆ ಹೆಸರಾದ ಬೇಲೂರು, ಹಳೇಬೀಡಿಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ 30 ಕೋಟಿ ರೂ. ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಮಾಹಿತಿ ನೀಡಿದರು. ಪಟ್ಟಣಕ್ಕೆ ಆಗಮಿಸಿ ಶ್ರೀಚನ್ನಕೇಶವಸ್ವಾಮಿ ದರ್ಶನ ಪಡೆದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಎರಡು ಪಟ್ಟಣಗಳಿಗೆ ಪ್ರವಾಸಿಗರು ಹೆಚ್ಚಾಗಿ ಭೇಟಿ ನೀಡುತ್ತಾರೆ. ಇಲ್ಲಿಗೆ ಆಗಮಿಸುವವರಿಗೆ ಮೂಲಸೌಕರ್ಯ ಕಲ್ಪಿಸುವ ಜೊತೆಗೆ ಸ್ಥಳೀಯವಾಗಿಯೂ ಅನೇಕ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವ ಅಗತ್ಯವಿದೆ…
ವನ್ಯ ಜೀವಿಗಳ ಮಾದರಿ ಪ್ರದರ್ಶನ `ಮೈಸೂರು ಉತ್ಸವ’ಕ್ಕೆ ಚಾಲನೆ
June 16, 2018ಮೈಸೂರು: ಕಾಡು ಪ್ರಾಣಿಗಳನ್ನು ನೋಡಲೆಂದು ಮೃಗಾಲ ಯಕ್ಕೆ ಹೋದರೂ ಅವುಗಳ ಗೀಳನ್ನು ಕೇಳುವುದು ಅಪರೂಪ. ಆದರೆ, ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನದಿಂದ ತಯಾರಿಸಿದ ರೋಬೋಟಿಕ್ ವನ್ಯ ಮೃಗಗಳ ಮೃಗಾಲಯವನ್ನೇ ನಿರ್ಮಿಸಿದ್ದು ಪ್ರಾಣಿಗಳ ಚಲನೆ, ಗೀಳಿನ ಅನುಭವ ಪಡೆಯಬಹುದು. ಹೌದು! ಮಕ್ಕಳಲ್ಲಿ ನಿಸರ್ಗದ ಬಗ್ಗೆ ಅರಿವು ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಮೆ.ಫನ್ವಲ್ರ್ಡ್ ಅಂಡ್ ರೆಸಾಟ್ರ್ಸ್ ಇಂಡಿಯಾ ಪ್ರೈ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ವಿನೋದ್ಕುಮಾರ್ ಸಬರ್ವಾಲ್, ಇಂದಿನಿಂದ ಮೈಸೂರು ಉತ್ಸವ ವಸ್ತು…
ರಾಜ್ಯದ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
June 16, 2018ನಾಗಮಂಗಲ: ದೇಶದಲ್ಲೇ ಅತ್ಯಂತ ಹೆಚ್ಚಿನ ಪ್ರವಾಸಿ ತಾಣಗಳು ರಾಜ್ಯದಲ್ಲಿದ್ದು, ಅವುಗಳಲ್ಲಿ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ತಾಲೂಕಿನ ಮನೆದೇವರು ಕೋಟೆಬೆಟ್ಟದ ಕಂಬದನರಸಿಂಹಸ್ವಾಮಿ ಮತ್ತು ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಂದಾಜು 3 ಸಾವಿರ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳ ಸಭೆ ನಡೆಸಿ ಸೂಚಿಸಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ…
ಹೆಚ್ಡಿಕೆ ಮಾದರಿಯಲ್ಲೇ ಗ್ರಾಮ ವಾಸ್ತವ್ಯ ಹರದನಹಳ್ಳಿಯಲ್ಲಿ ಸಚಿವ ಸಾರಾ ಮಹೇಶ್ ಹೇಳಿಕೆ
June 11, 2018ಭೇರ್ಯ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮವಾಸ್ತವ್ಯ ಮಾದರಿಯಲ್ಲೇ ತಾನೂ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ಕಾರ್ಯ ಕ್ರಮ ಆರಂಭಿಸುವುದಾಗಿ ಪ್ರವಾಸೋ ದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಪ್ರಕಟಿಸಿದರು. ಅವರು ಕೆ.ಆರ್.ನಗರ ತಾಲೂಕು ಹರದನಹಳ್ಳಿಯಲ್ಲಿ ಭಾನುವಾರ ಗ್ರಾಮಸ್ಥ ರಿಂದ ಅಭಿನಂದನೆ ಸ್ವೀಕರಿಸಿ ಮಾತ ನಾಡಿದರು. ಹರದನಹಳ್ಳಿಯಿಂದಲೇ ಗ್ರಾಮವಾಸ್ತವ್ಯ ಕಾರ್ಯಕ್ರಮ ಪ್ರಾರಂಭ ಗೊಳ್ಳಲಿದ್ದು, ಜುಲೈ 6 ರಂದು ರಾತ್ರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿದ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡ ಲಾಗುವುದು. ಜು.7ರಂದು ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ 60…
ಕೊಟ್ಟ ಮಾತಿನಂತೆ ಕುಮಾರಸ್ವಾಮಿಯವರು ನನ್ನನ್ನು ಮಂತ್ರಿ ಮಾಡಿದರು: ಸಾರಾ
June 9, 2018ಕೆ.ಆರ್.ನಗರ: ನನ್ನ ನೆಚ್ಚಿನ ನಾಯಕರಾದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೆ.ಆರ್.ನಗರ ತಾಲೂಕಿನ ಜನತೆಗೆ ಚುನಾವಣೆ ಸಂದರ್ಭ ದಲ್ಲಿ ನೀಡಿದ ಆಶ್ವಾಸನೆಯಂತೆ ನನ್ನನ್ನು ಸಚಿವನನ್ನಾಗಿ ಮಾಡಿ ಪ್ರವಾಸೋ ದ್ಯಮ ಮತ್ತು ರೇಷ್ಮೆ ಖಾತೆಯನ್ನು ನೀಡಿದ್ದು, ಅವರ ಆಶಯದಂತೆ ಈ ರಾಜ್ಯದ ಜನತೆಗೆ ಮತ್ತು ಸರ್ಕಾರಕ್ಕೆ ಹೆಸರು ತರುವ ರೀತಿ ಯಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ನೂತನ ಸಚಿವ ಸಾ.ರಾ.ಮಹೇಶ್ ಹೇಳಿದರು. ಸಚಿವರಾಗಿ ನೇಮಕಗೊಂಡ ನಂತರ ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಸಾ.ರಾ.ಮಹೇಶ್ ತಾಲೂಕಿನ ಜೆಡಿಎಸ್ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಸ್ವೀಕರಿಸಿ, ನಂತರ…
ನೂತನ ಸಚಿವ ಸಾ.ರಾ.ಮಹೇಶ್ಗೆ ಮೈಸೂರಲ್ಲಿ ಅದ್ಧೂರಿ ಸ್ವಾಗತ
June 8, 2018ಮೈಸೂರು: ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಕೆ.ಆರ್.ನಗರದ ಶಾಸಕ ಸಾ.ರಾ.ಮಹೇಶ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮೈಸೂರು-ಬೆಂಗಳೂರು ಮುಖ್ಯರಸ್ತೆ, ಟೋಲ್ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಪಟಾಕಿ ಸಿಡಿಸಿ, ಬೃಹತ್ ಹಾರ ಹಾಕಿ, ಹೂಗುಚ್ಛಗಳನ್ನು ನೀಡಿ, ಆರತಿ ಬೆಳಗಿ, ಜೈಕಾರ ಹಾಕಿ ಸಂಭ್ರಮದಿಂದ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಾ.ರಾ.ಮಹೇಶ್, ನಾನು ಕೆ.ಆರ್.ನಗರದ ಶಾಸಕನಾದರೂ ನೆಲೆಸಿರುವುದು ಮೈಸೂರಿನಲ್ಲಿ. ಇಷ್ಟೊಂದು ಸಂಭ್ರಮದಿಂದ ನನ್ನನ್ನು ಸ್ವಾಗತಿಸಿರುವುದು ಸಂತಸ ತಂದಿದೆ….