ಮೈಸೂರು: ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ರಾಣಿ ಅವರು, ಯೋಗ ಮಾಡುವುದರಿಂದ ರೋಗ ಮುಕ್ತರಾಗಬಹುದು. ಇಂದಿನ ಆಧುನಿಕ ಯುಗದಲ್ಲಿ ಒತ್ತಡದಿಂದ ತುಂಬಿರುವ ಜೀವನದಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಮಾನವ ಜನಾಂಗ ಕುಗ್ಗಿ ಹೋಗುತಿದ್ದು, ಯೋಗ ಮತ್ತು ಧ್ಯಾನ ಮಾಡುವುದರಿಂದ ಎಲ್ಲದರಿಂದಲೂ ಮುಕ್ತಿ ಸಿಗುತ್ತದೆ. ಇಂದಿನ ಆಹಾರ ಪದ್ದತಿ ಹಲವು ರೋಗಗಳಿಗೆ ಮೂಲ ವಾಗಿರುವುದರಿಂದ ಯೋಗದಿಂದ ಮಾತ್ರ ಇದಕ್ಕೆ ಪರಿಹಾರ ಸಿಗುತ್ತದೆ…