ಮೈಸೂರು: ಮಹಾರಾಜ ಜಯಚಾಮರಾಜ ಒಡೆಯರ್ ಜನಪರ ಆಡಳಿತಕ್ಕೆ ಹೆಸರಾಗಿದ್ದೂ ಮಾತ್ರವಲ್ಲ, ಕಲೆ, ಸಾಹಿತ್ಯ ಹಾಗೂ ಸಂಗೀತಕ್ಕೆ ಪ್ರೋತ್ಸಾಹ ನೀಡಿದ್ದರು. ವಿವಿಧ ಪ್ರಕಾರದ ಗೀತೆಗಳ 20 ಸಾವಿರಕ್ಕೂ ಹೆಚ್ಚು ಧ್ವನಿ ಮುದ್ರಿಕೆಗಳನ್ನು ಸಂಗ್ರಹಿಸಿದ್ದರು ಎಂದು ಎಸ್ಬಿಆರ್ಆರ್ ಮಹಾಜನ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಭೀಮರಾಜ್ ಸ್ಮರಿಸಿದರು. ಮೈಸೂರಿನ ನಜರ್ಬಾದಿನ ಶ್ರೀವಾಣಿವಿಲಾಸ ಅರಸು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶ್ರೀಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರ 100ನೇ ಜನ್ಮದಿನಾಚರಣೆಯಲ್ಲಿ ಅವರು…