ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಶ್ರೀಕೃಷ್ಣ ಜಯಂತಿ ಯನ್ನು ಇಂದು ನಗರದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ನಗರದ ಜೆ.ಎಚ್.ಪಟೇಲ್ ಸಭಾಂ ಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ವನ್ನು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಉದ್ಘಾಟಿಸಿದರು. ಇದೇ ಸಂದ ರ್ಭದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣ ಸತ್ಯಮೇವ ಜಯತೇ ಎಂಬುದನ್ನು ಪ್ರತಿಪಾದಿಸಿದ. ಮಾನವೀಯ ಮೌಲ್ಯ ಗಳನ್ನು ಸಾರುವಲ್ಲಿ ಶ್ರೀಕೃಷ್ಣ ಅದರ್ಶ ವಾಗಿದ್ದಾನೆ ಎಂದರು. ಶ್ರೀ ಕೃಷ್ಣನ ಕುರಿತು ಹೆಚ್ಚು ಓದಬೇಕು. ಮಕ್ಕಳಿಗೂ ಸಹ ಕೃಷ್ಣನ ಕುರಿತು ತಿಳಿಸಿ…