ಮೈಸೂರು: ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಸ್ನೇಹ ಸಿಂಚನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ನಟರಾಜ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಚಿದಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಎಸ್.ಎ.ರಾಮದಾಸ್ ಮಾತನಾಡುತ್ತಾ, ಪಾಶ್ಚಿಮಾತ್ಯ ಸಂಸ್ಕøತಿಯನ್ನು ಅಳವಡಿಸಿಕೊಳ್ಳುವ ಈ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಜ್ಞಾನದ ಜ್ಯೋತಿಯನ್ನು ಹಚ್ಚುವುದರ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರನ್ನು ಸ್ವಾಗತಿಸಿದ್ದು ವಿಶೇಷವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದು ಆಹ್ಲಾದಕರವಾಗಿದೆ. ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶದ…