ಬೆಂಗಳೂರು: ಭಕ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿ ಪೊಲೀಸರು, ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸೇರಿದಂತೆ ಏಳು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ನಾನು ಬಾಲಕಿ ಇದ್ದಾಗಿನಿಂದಲೂ ಸ್ವಾಮೀಜಿ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ. ಅದಕ್ಕೆ ಹಲವರು ಸಹಕರಿಸಿದ್ದಾರೆ ಎಂದು ಆರೋಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು, ಗಿರಿನಗರ ಪೊಲೀಸ್ ಠಾಣೆಗೆ 2015ರ ಆಗಸ್ಟ್ 29 ರಂದು ದೂರು ನೀಡಿದ್ದರು. ಐಪಿಸಿ 376 (ಅತ್ಯಾಚಾರ), ಐಪಿಸಿ…