ಮೈಸೂರು: ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವ ದಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಚುಂಚನ ಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಸಂಬಂಧಿಸಿದಂತೆ ಈ ಭಾಗದ ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಅವರು, ಕಾರ್ಖಾನೆ ಪ್ರಾರಂಭಿಸುವ ಪ್ರಕ್ರಿಯೆಗೆ ಮುನ್ನವೇ ನೌಕರರ ಬಾಕಿ ವೇತನ ಪಾವತಿಸಲು ಆದೇಶಿಸಿದರು. ಕಾರ್ಮಿಕರ ವೇತನ ಬಾಕಿ 14.70 ಕೋಟಿ ರೂ.ಗಳಲ್ಲಿ ಈಗಾಗಲೇ ಅರ್ಧದಷ್ಟು ವೇತನ ಪಾವತಿಸಲು…