ಬೆಂಗಳೂರು ಮಾರ್ಚ್ 26 (ಕೆಎಂಶಿ) : ಎಸ್ಎಸ್ಎಲ್ಸಿ ಪರೀಕ್ಷೆ ಏಪ್ರಿಲ್ 20 ರ ನಂತರ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಿರುವುದಲ್ಲದೆ, ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಎಂಬ ವದಂತಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿಯವರು ಮೂರು ವಾರಗಳ ಕಾಲ ವಿಧಿಸಿರುವ ಕಫ್ರ್ಯೊ ಸಡಿಲಗೊಂಡ ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ. 7 ರಿಂದ 9ನೇ ತರಗತಿಯ ಪರೀಕ್ಷೆಗಳು ಕೂಡಾ ಏಪ್ರಿಲ್…
ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
April 30, 2019ಬೆಂಗಳೂರು (ಏ. 29):ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ (ಏ. 30) ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ. ನಾಳೆ (ಏ. 30) ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ನಂತರ ಪ್ರೌಢ ಶಿಕ್ಷಣ ಮಂಡಳಿಯ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 1 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು karresults.nic.in ಅಥವಾ kseeb.kar.nic.in ವೆಬ್ಸೈಟ್ ಗಳಿಗೆ ಲಾಗ್ಇನ್ ಆಗಿ ಫಲಿತಾಂಶ…
ಮೈಸೂರಿನ 6 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಆರಂಭ
April 11, 2019ಮೈಸೂರು: ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್ಎಸ್ ಎಲ್ಸಿ ವಾರ್ಷಿಕ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಮೈಸೂರಿನ 6 ಕೇಂದ್ರಗಳಲ್ಲಿ ಇಂದಿನಿಂದ ಆರಂಭವಾಯಿತು. ಮೈಸೂರು ಕುವೆಂಪುನಗರದಲ್ಲಿರುವ ಕಾವೇರಿ ಪ್ರೌಢಶಾಲೆ, ಜ್ಞಾನಗಂಗ ಪ್ರೌಢಶಾಲೆ, ಸರಸ್ವತಿ ಪುರಂನಲ್ಲಿರುವ ವಿಜಯವಿಠಲ, ವಿವಿ. ಮೊಹ ಲ್ಲಾದ ನಿರ್ಮಲಾ ಕಾನ್ವೆಂಟ್, ಜಯಲಕ್ಷ್ಮಿ ಪುರಂನ ಚಿನ್ಮಯಿ ಪ್ರೌಢಶಾಲೆ ಹಾಗೂ ಎನ್.ಆರ್.ಮೊಹ ಲ್ಲಾದ ಸೆಂಟ್ ಫಿಲೋಮಿನಾ ಪ್ರೌಢಶಾಲೆಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಎಲ್ಲಾ 6 ಕೇಂದ್ರಗಳ ಸುತ್ತ 200…
ಮಾ.21ರಿಂದ SSLC ಪರೀಕ್ಷೆ
March 19, 2019ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ಎಸ್ಎಲ್ಸಿ ಪರೀಕ್ಷೆಗಳು ಇದೇ ಮಾರ್ಚ್21ರಿಂದ ಏಪ್ರಿಲ್ 4ರವರೆಗೆ ನಡೆ ಯಲಿವೆ. ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆ ಯಲಿದ್ದಾರೆ. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿ ಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿ ದ್ದಾರೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ…
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ: ಎಚ್ಚರ ವಹಿಸಲು ಸಿಎಂ ತಾಕೀತು
February 17, 2019ಬೆಂಗಳೂರು: ಮುಂದಿನ ತಿಂಗಳಿನಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಲೋಪವಿಲ್ಲದೆ ನಡೆಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಮತ್ತು ಗೃಹ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಪೋಷಕರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಯನ್ನು ಆಯೋಜಿಸಬೇಕು ಎಂದಿದ್ದಾರೆ. ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದಿನ ಪ್ರಕರಣಗಳಲ್ಲಿ ಭಾಗಿಯಾ ಗಿದ್ದ ಆರೋಪಿಗಳ ಮೇಲೆ ತೀವ್ರ…
ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಇಂದು 5 ಕ್ಲಸ್ಟರ್ಗಳ ಕಾರ್ಯಾಗಾರ
January 25, 2019ಮೈಸೂರು: ಮೈಸೂರು ಜಿಲ್ಲೆಯನ್ನು ಶೈಕ್ಷ ಣಿಕವಾಗಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ (ಜ.25) ಮೈಸೂರಿನ ಶಾರದಾವಿಲಾಸ ಶತಮಾನೋ ತ್ಸವ ಭವನದಲ್ಲಿ ಏರ್ಪಡಿಸಿರುವ 5 ಕ್ಲಸ್ಟರ್ಗಳ ಕಾರ್ಯಾ ಗಾರದಲ್ಲಿ ಒಟ್ಟು 80 ಶಾಲೆಗಳ 1180 ಮಕ್ಕಳು ಭಾಗವಹಿ ಸುತ್ತಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಯ ಹಿಂದುಳಿಯುವಿಕೆಗೆ ಕಾರಣ ಗಳನ್ನು ಪತ್ತೆ ಹಚ್ಚಿ, ಮಕ್ಕಳು ಉತ್ತೀರ್ಣರಾಗಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆತ್ಮಾವಲೋಕನ ಹಿನ್ನೆಲೆಯಲ್ಲಿ ಈ ಕಾರ್ಯಾಗಾರ ಹೆಚ್ಚು ಮಹತ್ವದ್ದಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಪಾಸಿಂಗ್ ಪ್ಯಾಕೇಜ್…
SSLC ಪರೀಕ್ಷೆಗೆ ವಾಚ್ ಕಟ್ಟಿ ಬಂದರೆ ಪ್ರವೇಶವಿಲ್ಲ!
November 28, 2018ಬೆಂಗಳೂರು: ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಕೈಗೆ ವಾಚು ಕಟ್ಟಿಕೊಂಡು ಹೋಗಕೂಡದು! ಒಂದು ವೇಳೆ ವಾಚ್ ಧರಿಸಿ ಹೋದರೆ ನಿಮಗೆ ಪ್ರವೇಶ ಸಿಗುವುದಿಲ್ಲ. ಏಕೆಂದರೆ ಈ ಬಾರಿಯ ಪರೀಕ್ಷೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ವಾಚ್ ಕಟ್ಟಿಕೊಳ್ಳಬಾರದೆಂದು ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೂೀಲೆ ಹೊರಡಿಸಿದೆ. ವರ್ಷದಿಂದ ವರ್ಷಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಲ್ಲಿ ಸುಧಾರಣೆ ತರಲು ಹೆಚ್ಚು ಒತ್ತು ನೀಡುತ್ತಿರುವ ಸರ್ಕಾರ, ಈ ಬಾರಿಯ ಪರೀಕ್ಷಾ ಸಮಯದಲ್ಲಿ ಕೈಗೆ ವಾಚ್ ಕಟ್ಟದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಸೂಚನೆ…
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ: ಅನುತ್ತೀರ್ಣಗೊಂಡ ವಿದ್ಯಾರ್ಥಿ ನೇಣಿಗೆ ಶರಣು
July 21, 2018ಚಾಮರಾಜನಗರ, ಜು.20- ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ನಿವಾಸಿ ಸಿದ್ದಪ್ಪ ಎಂಬುವವರ ಮಗ ಅಕ್ಷಯ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ್ ಕಳೆದ ಮಾರ್ಚ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದನು. ನಂತರ ಇತ್ತೀಚೆಗೆ ನಡೆದ ಪೂರಕ ಪರೀಕ್ಷೆ ಬರೆದಿದ್ದ. ಗುರುವಾರ ಸಂಜೆ ಪೂರಕ ಫಲಿತಾಂಶ ಪ್ರಕಟಗೊಂಡಿತ್ತು. ಅದನ್ನು ನೋಡಿದ ಅಕ್ಷಯ್, ಆ ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದನು….