ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನ ಗಳ ಕಾಲ ಆಯೋಜಿಸಿರುವ ರಾಜ್ಯಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಗುರು ವಾರ ಚಾಲನೆ ನೀಡಲಾಯಿತು. ಹಾಕಿ ಮೈಸೂರು ಸಂಸ್ಥೆ ಆಯೋಜಿ ಸಿರುವ ಹಾಕಿ ಪಂದ್ಯಾವಳಿಗೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ, ಪ್ರಸ್ತುತ ಕ್ರಿಕೆಟ್, ಪ್ರೋ ಕಬಡ್ಡಿಗೆ ಸಿಗುತ್ತಿರುವ ಪ್ರಾಮುಖ್ಯತೆ ಹಾಕಿ ಪಂದ್ಯಾವಳಿಗೆ ಸಿಗುತ್ತಿಲ್ಲ. ಇದರಿಂದಾಗಿ ಹಾಕಿ ತೆರೆಮರೆಗೆ ಸರಿಯುತ್ತಿದೆಯೇನೋ ಎಂಬ ಭಾವನೆ ಮೂಡುತ್ತಿದೆ. ಆದರೆ, ಕೊಡ…