ಮೈಸೂರು: ಸಂಕಷ್ಟದ ನಡುವೆಯೂ ಶ್ರಮಪಟ್ಟು ಬೆಳೆದ ಕಬ್ಬಿಗೆ ಕೊಡಬೇಕಾದ ಕೋಟ್ಯಾಂತರ ರೂ. ಹಣವನ್ನು ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿದ್ದರೂ ನ್ಯಾಯ ಕೊಡಿಸಬೇಕಾದ ಸರ್ಕಾರ ಅಸಹಾಯಕತೆ ವ್ಯಕ್ತಪಡಿಸುತ್ತಿದೆ. ಇಂತಹ ಸನ್ನಿವೇಶದಲ್ಲಿ ಹಗ್ಗಜಗ್ಗಾಟ ಸಾಮಾನ್ಯ ಸಂಗತಿ ಎನ್ನುವಂತಾಗಿದ್ದು, ಬೆವರು ಸುರಿಸಿ ಬೆಳೆದ ಕಬ್ಬನ್ನು ಕಾರ್ಖಾನೆ ಗಳಿಗೆ ಪೂರೈಸಿದ ರೈತ, ಸರ್ಕಾರದ ಮೊರೆ ಹೋದರೂ ಪ್ರಯೋಜನವಾಗುವ ಪರಿಸ್ಥಿತಿ ಮಾತ್ರ ಕಾಣುತ್ತಲೇ ಇಲ್ಲ. ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲವೇ ಎಂದು ಅವಲೋಕಿಸಿ ದರೆ, ಸರ್ಕಾರವೇ ಕಾರ್ಖಾನೆ…