ಮೈಸೂರು: ಸುಳ್ಯದ ದಂತ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೈಸೂರು ಯುವತಿ ಕಾಲೇಜಿನ ಹಾಸ್ಟೆಲ್ನಲ್ಲಿ ಬುಧವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಟೆರೆಶಿಯನ್ ಕಾಲೇಜು ಸಮೀ ಪದ ಗುರುರಾಜ ಬಡಾವಣೆಯ ಕಾವೇರಿ ಮಾರ್ಗದ ನಿವಾಸಿ, ವಿ.ಕೆ.ಬೇಕರಿ ಮಾಲೀಕ ರಮೇಶ್ ಎಂಬುವರ ಪುತ್ರಿ ಸುಮನ(19) ಆತ್ಮಹತ್ಯೆ ಮಾಡಿಕೊಂಡವರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದ ಸುಮನ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರತಿಷ್ಠಿತ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ…