ಮಡಿಕೇರಿ: ತೀವ್ರ ಮಳೆ ಯಿಂದಾಗಿ ಕೊಡಗು ಜಿಲ್ಲೆಗೆ ಭಾರೀ ನಷ್ಟ ಸಂಭವಿಸಿದ್ದು, ರಾಜ್ಯ ಸರಕಾರ ಜಿಲ್ಲೆಯ ನೆರವಿಗೆ ಧಾವಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಆಗ್ರಹಿಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಮಂಗಳದೇವಿ ನಗರ, ಮಂಗಳೂರು ರಸ್ತೆ, ಮೇಕೇರಿ-ಮೂರ್ನಾಡು ಬೈ ಪಾಸ್ ರಸ್ತೆಯಲ್ಲಿ ವಾಹನ ಸಂಚಾರದ ಸ್ಥಿತಿಗತಿಗಳ ಕುರಿತು ಸುನೀಲ್ ಸುಬ್ರಮಣಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿ ಕಾರಿಗಳೊಂದಿಗೆ ಚರ್ಚಿಸಿದ ಸುನೀಲ್ ಸುಬ್ರಮಣಿ, ರಸ್ತೆಯ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು. ಮಂಗಳೂರು…
ನಾಲ್ಕುನಾಡು ಅರಮನೆ ಸಂರಕ್ಷಣೆಗೆ ಮನವಿ
July 13, 2018ಮಡಿಕೇರಿ: ನಾಲ್ಕು ನಾಡು ಅರಮನೆ ಸಂರಕ್ಷಣೆಗೆ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಮನವಿ ಮಾಡಿದ್ದಾರೆ. ಅವರು ವಿಧಾನಪರಿಷತ್ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ಗಮನ ಸೆಳೆದು ಈ ಮನವಿ ಮಾಡಿದರು. ಕೊಡಗು ಜಿಲ್ಲೆಯಲ್ಲಿರುವ ಮಡಿಕೇರಿ ತಾಲೂಕಿನ ನಾಲ್ಕುನಾಡು ಅರಮನೆ ಪ್ರಸ್ತುತ ರಾಜ್ಯ ಸರ್ಕಾರದ ಸುಪರ್ದಿಯಲ್ಲಿದೆಯೇ? ಎಂಬ ಸುನೀಲ್ ಸುಬ್ರಮಣಿ ಅವರ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹೌದು ಎಂದು ಉತ್ತರಿಸಿದರು. ಇದ್ದಲ್ಲಿ ಈ ನಾಲ್ಕುನಾಡು ಅರಮನೆಯನ್ನು ಸುಸ್ಥಿತಿಯಲ್ಲಿ ಕಾಪಾಡಲು ಯಾವ ಕ್ರಮ ವಹಿಸಲಾಗಿದೆ? ಎಂಬ ಪ್ರಶ್ನೆಗೆ…
ಮೈಸೂರು-ತಲಚೇರಿ ರೈಲು ಮಾರ್ಗ ಸರ್ವೇಗೆ ಅನುಮತಿ ನೀಡಿಲ್ಲ
July 12, 2018ಮಡಿಕೇರಿ: ದಕ್ಷಿಣ ಕೊಡಗಿನ ಮೂಲಕ ಹಾದು ಹೋಗಲಿರುವ ಮೈಸೂರು-ತಲಚೇರಿ ಉದ್ದೇಶಿತ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಅನುಮತಿ ನೀಡಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಹ್ಮಣಿ ಪ್ರಸ್ತುತ ರೈಲು ಮಾರ್ಗದ ಸರ್ವೇ ಕಾರ್ಯ ಉಲ್ಲೇಖಿಸಿ ಸಭಾಪತಿಗಳಿಗೆ ಪತ್ರ ಬರೆದಿದ್ದರು. ಅಲ್ಲದೆ ಶೂನ್ಯ ವೇಳೆಯಲ್ಲಿ ಈ ವಿಚಾರದ ಪ್ರಸ್ತಾಪಕ್ಕೆ ಅವಕಾಶವನ್ನು ಕೋರಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಟಷ್ಟನೆ ನೀಡಿ, ಉದ್ದೇಶಿತ ಮೈಸೂರು-ತಲಚೇರಿ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಸರ್ವೇ ಕಾರ್ಯ…