ಸುಂಟಿಕೊಪ್ಪ: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾ ಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೆರವಿನೊಂದಿಗೆ ಸೇರಿ ಶಾಲಾ ಮಕ್ಕಳಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಬೆಳೆ ಸುವ ದಿಸೆಯಲ್ಲಿ ಶನಿವಾರ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸ್ವಚ್ಚತಾ ಶಪಥ ದಿನ’ ಆಚರಿಸಲಾಯಿತು. ಮಕ್ಕಳಿಗೆ ಸ್ವಚ್ಚತೆ ಕುರಿತ ಸಂದೇಶ ನೀಡಿದ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಸೆ.15ರವರೆಗೆ ಶಾಲಾ ಹಂತ ದಲ್ಲಿ ನಡೆಯುವ ‘ಸ್ವಚ್ಚತಾ ಪಖ್ವಾಡ’ ಕಾರ್ಯ ಕ್ರಮದಲ್ಲಿ ಶಾಲಾ ಮಕ್ಕಳಲ್ಲಿ ಪರಿಸರ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸಿ…