ಬೆಂಗಳೂರು, ಮೇ 31- ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ಅನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಶನಿವಾರ ಹೇಳಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾರ್ಗ ಸೂಚಿ ಹೊರಡಿಸುತ್ತಿದ್ದಂತೆಯೇ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ಶಾಲೆಗಳು ಯಾವಾಗ ಪುನ ರಾರಂಭಗೊಳ್ಳುತ್ತದೆ ಎಂಬ ಪ್ರಶ್ನೆಗೆ ಮೌನತಾಳಿದ್ದಾರೆ. ಪಠ್ಯಕ್ರಮಗಳ ಗಾತ್ರ…
ರಾಜ್ಯದ ಶಾಲಾ ಶಿಕ್ಷಕರ ರಜೆಯನ್ನು ಏಪ್ರಿಲ್ 11ರ ವರೆಗೆ ವಿಸ್ತರಣೆ: ಸಚಿವ ಸುರೇಶ್ ಕುಮಾರ್
March 30, 2020ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದೆ. ಮಾರ್ಚ್ 31ರ ವರೆಗೆ ಮಾತ್ರವೇ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಆದ್ರೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಕಾಲ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಣೆ ಮಾಡಿದ್ದರ ಹಿನ್ನಲೆಯಲ್ಲಿ, ರಾಜ್ಯದ ಶಾಲಾ ಶಿಕ್ಷಕರ ರಜೆಯನ್ನು ಏಪ್ರಿಲ್ 11ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ….
ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ
March 28, 2020ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ತರಕಾರಿ ವಾಹನಗಳಿಗೆ ರಾಸಾಯನಿಕ ಸಿಂಪಡಿಸುವಂತೆ ಸೂಚನೆ ಗುಂಡ್ಲುಪೇಟೆ,ಮಾ.28(ಎಂಟಿವೈ)- ನೊವೆಲ್ ಕೊರೊನಾ ವೈರಾಣು ವ್ಯಾಪ್ತಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಶನಿವಾರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212(766) ಹಾದು ಹೋಗುವ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್…
ಏ.20ರ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ನಿರ್ಧಾರ: ಸುರೇಶ್ ಕುಮಾರ್
March 26, 2020ಬೆಂಗಳೂರು ಮಾರ್ಚ್ 26 (ಕೆಎಂಶಿ) : ಎಸ್ಎಸ್ಎಲ್ಸಿ ಪರೀಕ್ಷೆ ಏಪ್ರಿಲ್ 20 ರ ನಂತರ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಿರುವುದಲ್ಲದೆ, ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಎಂಬ ವದಂತಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿಯವರು ಮೂರು ವಾರಗಳ ಕಾಲ ವಿಧಿಸಿರುವ ಕಫ್ರ್ಯೊ ಸಡಿಲಗೊಂಡ ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ. 7 ರಿಂದ 9ನೇ ತರಗತಿಯ ಪರೀಕ್ಷೆಗಳು ಕೂಡಾ ಏಪ್ರಿಲ್…
ಎಸ್ಎಸ್ಎಲ್ಸಿ ಟಾಪ್ 10 ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್ಸೈಟ್ನಲ್ಲಿ ಪ್ರಕಟ
March 1, 2020ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್ಕುಮಾರ್ ಹೇಳಿಕೆ ಮಡಿಕೇರಿ,ಫೆ.29-ಫಲಿತಾಂಶದಲ್ಲಿ ಹೆಚ್ಚಳ ಹಾಗೂ ವಿದ್ಯಾರ್ಥಿಗಳು ಪರೀಕ್ಷೆ ಯಲ್ಲಿ ಹೇಗೆ ಉತ್ತರಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್ಎಸ್ ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯದ 10 ವಿದ್ಯಾರ್ಥಿಗಳ ಎಲ್ಲಾ ವಿಷಯದ ಉತ್ತರ ಪತ್ರಿಕೆಯನ್ನು ವೈಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥ ಮಿಕ ಮತ್ತು ಪೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು. ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ…
ನಿಗದಿತ ಸಮಯಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ
February 23, 2020ವಿದ್ಯಾರ್ಥಿಗಳು, ಪೋಷಕರಿಗೆ ಅನುಮಾನ ಬೇಡ: ಸುರೇಶ್ಕುಮಾರ್ ಸ್ಪಷ್ಟನೆ ಬೆಂಗಳೂರು, ಫೆ. 22(ಕೆಎಂಶಿ)- ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ಮಕ್ಕಳು ಮತ್ತು ಪೋಷಕರು ಯಾವುದೇ ಗೊಂದಲ ಮತ್ತು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ. ಹಿಂದೆ ನಡೆದುಕೊಂಡು ಬಂದಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸು ತ್ತೇವೆ ಎನ್ನುವ ಭರವಸೆಯನ್ನು ವಿದ್ಯಾರ್ಥಿಗಳು ಮತ್ತು ಪೋಷಕ ರಿಗೆ ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಗೊಂದಲಗಳು ಮಾ.27ರಿಂದ ಆರಂಭವಾಗುವ…
ಸುವರ್ಣಾವತಿ ಮತ್ತಿತರ ಜಲಾಶಯಗಳಿಂದ ಬೆಳೆಗೆ ನೀರು ಹರಿಸುವ ಸಂಬಂಧ ಚರ್ಚೆ
January 9, 2020ಮೈಸೂರು,ಜ.8-ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ, ಚಿಕ್ಕಹೊಳೆ ಮತ್ತು ನಲ್ಲೂರು ಅಮಾನಿಕೆರೆ ಜಲಾಶಯಗಳಿಂದ ಬೇಸಿಗೆ ಬೆಳೆಗಳಿಗೆ ನೀರು ಹಂಚಿಕೆ ಬಗ್ಗೆ ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ಕುಮಾರ್ ಅವರು ಮಂಗಳವಾರ ಕಾಡಾ ಕಚೇರಿಯಲ್ಲಿ ಅಧಿಕಾರಿ ಗಳು ಮತ್ತು ರೈತ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಜಲಾಶಯದಲ್ಲಿನ ನೀರಿನ ಮಟ್ಟ ಸಮೀಕ್ಷೆ ವರದಿ ಆಧಾರಿತ ಮಾತನಾಡಿದ ಸಚಿವರು, ಸುವರ್ಣಾವತಿ ಜಲಾ ನಯನ ಪ್ರದೇಶದಲ್ಲಿ ಈ ಬಾರಿ ಸಾಧಾರಣ ಮಳೆಯಾಗಿದ್ದು, ಜಲಾಶಯದಲ್ಲಿ 1105.43 ಎಮ್ಸಿಎಫ್ಟಿ ನೀರು ಶೇಖರಣೆ ಯಾಗಿದೆ. ಜಲಾಶಯದ ಅಡಿಯಲ್ಲಿ ಒಟ್ಟು…
ಕಾಂಗ್ರೆಸ್ನಿಂದ ರಮೇಶ್ ಕುಮಾರ್, ಬಿಜೆಪಿಯಿಂದ ಸುರೇಶ್ಕುಮಾರ್ ಸ್ಪರ್ಧೆ
May 25, 2018ಬೆಂಗಳೂರು: ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಮಾಜಿ ಸಚಿವ ರಮೇಶ್ಕುಮಾರ್, ಬಿಜೆಪಿಯ ಹಿರಿಯ ಸದಸ್ಯ ಸುರೇಶ್ ಕುಮಾರ್ ಪೈಪೋಟಿ ನಡೆಸಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕಡೇ ದಿನವಾದ ಇಂದು ಕಾಂಗ್ರೆಸ್, ಬಿಜೆಪಿಯ ಸದಸ್ಯರು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡು ವುದಕ್ಕೂ ಮುನ್ನವೇ ಸಭಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ರಮೇಶ್ಕುಮಾರ್ ಕಣಕ್ಕಿಳಿದಿರುವುದರಿಂದ ಅವರ ಆಯ್ಕೆ ಬಹುತೇಕ ಖಚಿತ. ವಿಧಾನಸಭೆಯಲ್ಲಿ…