ಮೈಸೂರು: ಮೈಸೂರಿನ ಸುತ್ತೂರು ಮಠದಲ್ಲಿ ಜೂನ್ 28ರ (ಗುರುವಾರ) ಸಂಜೆ 6 ಗಂಟೆಗೆ ಬೆಳದಿಂಗಳ ಸಂಗೀತದ ಅಂಗವಾಗಿ ವಿದುಷಿ ಸುಕನ್ಯಾ ರಾಮಗೋಪಾಲ್ ತಂಡದಿಂದ ಲಯವಾದ್ಯಗೋಷ್ಠಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಸಾನಿದ್ಯವನ್ನು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಶ್ರೀಮತಿ ಸುಕನ್ಯಾ ರಾಮಗೋಪಾಲ್ರವರು ದೇಶದ ಏಕೈಕ ಮಹಿಳಾ ಘಟಂ ಕಲಾವಿದರು. 12ನೇ ವರ್ಷದಲ್ಲಿ ಚೆನ್ನೈನ ಶ್ರೀಜಯಗಣೇಶ ತಾಳವಾದ್ಯ ವಿದ್ಯಾಶಾಲೆಯಲ್ಲಿ ವಿದ್ವಾನ್ ಟಿ.ಆರ್.ಹರಿಹರ ಶರ್ಮರ ಬಳಿ ಮೃದಂಗವನ್ನು ವಿದ್ವಾನ್ ಗುರುಮೂರ್ತಿಯವರ ಬಳಿ ವಯೊಲಿನ್ ಮತ್ತು ವಿದ್ವಾನ್ ವಿಕ್ಕು ವಿನಾಯಕರಾಮ್ರವರ…
ಮೈಸೂರು ಸಿಲ್ಕ್ ಸೀರೆಗೆ ಅಧಿಕ ಬೇಡಿಕೆ: ನೂತನ ನೇಯ್ಗೆ ಘಟಕ ಸ್ಥಾಪನೆಗೆ ನಿರ್ಧಾರ
June 14, 2018ಮೈಸೂರು: ಮೈಸೂರು ಸಿಲ್ಕ್ ಸೀರೆಗೆ ಹೆಚ್ಚಿನ ಬೇಡಿಕೆ ಇದ್ದು, ನೂತನ ನೇಯ್ಗೆ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ ಇಂದು ಭೇಟಿ ನೀಡಿ, ರೇಷ್ಮೆ ನೇಯ್ಗೆ ಘಟಕವನ್ನು ಪರಿಶೀಲಿಸಿದ ಬಳಿಕ ನಿಗಮದ ಶತಮಾನೋತ್ಸವ ಭವನದಲ್ಲಿ ಬುಧವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ರೇಷ್ಮೆಗೆ ದೇಶ ಹಾಗೂ ವಿದೇಶದಲ್ಲಿ ಭಾರೀ ಬೇಡಿಕೆ ಇದೆ. ಮೈಸೂರಿನಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ…
ಶಾಸ್ತ್ರೀಯ ಸಂಗೀತ ಕೇಳುಗರ ಸಂಖ್ಯೆ ಇಳಿಮುಖ: ಭೈರಪ್ಪ ವಿಷಾದ
May 30, 2018ಮೈಸೂರು: ಇತ್ತೀಚೆಗೆ ಶಾಸ್ತ್ರೀಯ ಸಂಗೀತ ಕೇಳುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಕೇಳುಗರ ಮನೋಧರ್ಮ ಬದಲಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದ ಆವರಣದಲ್ಲಿ 200ನೇ ಬೆಳ ದಿಂಗಳ ಸಂಗೀತ ಕಾರ್ಯಕ್ರಮದ ಅಂಗ ವಾಗಿ ಜುಗಲ್ಬಂದಿ ವಿಶೇಷ ಸಂಗೀತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತತ್ವಶಾಸ್ತ್ರಜ್ಞ ಪ್ಲೇಟೋ ಸಂಗೀತದ ಬಗ್ಗೆ ಒಂದು ಮಾತು ಹೇಳಿದ್ದಾನೆ. `ಯಾವ ಸಂಗೀತವನ್ನು ಆಸ್ವಾದನೆ ಮಾಡುತ್ತೇವೋ ಆ ಮನೋಧರ್ಮ ನಮ್ಮಲ್ಲಿ ಇರುತ್ತದೆ’ ಎಂದ ಅವರು, ಶಾಸ್ತ್ರೀಯ…
ಮೇ 15ರಂದು ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ
April 27, 2018ಮೈಸೂರು: ಚುನಾವಣಾ ಫಲಿತಾಂಶ ದಿನವಾದ ಮೇ 15ರಂದು, ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತವಾಗುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠಕ್ಕೆ ಗುರುವಾರ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಕೆಲ ಕಾಲ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ 113ರಿಂದ 120 ಸ್ಥಾನಗಳಲ್ಲಿ ಗೆದ್ದು, ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದ…
ಹಾಸನದ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು ಸಚಿವ ಎ.ಮಂಜು ವಿಶ್ವಾಸ
April 27, 2018ಮೈಸೂರು: ಹೊಳೆನರಸೀಪುರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ, ಜೆಡಿಎಸ್ ವಿರುದ್ಧ ಮಾಡಿರುವ ಆರೋಪವನ್ನು ಸಮರ್ಥಿಸಿಕೊಂಡ ಸಚಿವ ಎ.ಮಂಜು, ನಾನೂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ತಿಳಿಸಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠದಲ್ಲಿ ಶ್ರೀಗಳಿಂದ ಆಶೀರ್ವಾದ ಪಡೆದು, ಕೆಲಕಾಲ ಮಾತು ಕತೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಲಿನ ವಾಹನ ಗಳಲ್ಲಿ ಮದ್ಯ ಸಾಗಿಸುತ್ತಾರೆಂದು ಮಂಜೇ ಗೌಡ ಮಾಡಿರುವ ಆರೋಪದಲ್ಲಿ ಸತ್ಯ ವಿದೆ. ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ಅವರ ಬೀಗ…