ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಈಜು ಕೊಳದಲ್ಲಿ ಗುರುವಾರದಿಂದ ಆರಂಭವಾಗಲಿರುವ ರಾಜ್ಯಮಟ್ಟದ ಜೂನಿಯರ್ ಮತ್ತು ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ಬೆಂಗಳೂರು ಈಜು ಸಂಶೋಧನಾ ಕೇಂದ್ರದ ಸುಮಾರು 65ಕ್ಕೂ ಹೆಚ್ಚು ಉದಯೋನ್ಮುಖ ಈಜು ಪಟುಗಳು ಭಾಗವಹಿಸಲಿದ್ದಾರೆ ಎಂದು ಬಿಎಸ್ಆರ್ಸಿ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಮಹೇಶ್ ಕುಮಾರ್ ತಲ್ಲಂ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಬಿಎಸ್ಆರ್ಸಿ ಸಂಸ್ಥೆ ರಾಜ್ಯದಲ್ಲಿ ನಂ.1 ಈಜು ಸಂಸ್ಥೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂತರರಾಷ್ಟ್ರೀಯ ಗುಣಮಟ್ಟದ ತರಬೇತಿ ನೀಡುವ…