ಮಳೆ ನೀರು ಚರಂಡಿ ಮೇಲೆ ನಿರ್ಮಿಸಿರುವ ಅನಧಿಕೃತ ಮನೆಗಳ ತೆರವಿಗೆ ಸೂಚನೆ ಮೈಸೂರು: ಮೈಸೂರಿನ ಟಿ.ಕೆ.ಲೇಔಟ್ನಲ್ಲಿ ಮಳೆ ನೀರು ಚರಂಡಿ ಮೇಲೆ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳು ಹಾಗೂ ಮೀನಿನ ಕಬಾಬ್ ಅಂಗಡಿಯನ್ನು ತಕ್ಷಣ ತೆರವುಗೊಳಿಸಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೆಳಿಗ್ಗೆ ಮೈಸೂರಿನ ಹಿಂದಿನ 23ನೇ ವಾರ್ಡ್(ಹಾಲಿ 43ನೇ ವಾರ್ಡ್)ನಲ್ಲಿ ಪಾದಯಾತ್ರೆ ನಡೆಸಿದ ವೇಳೆ ಟಿ.ಕೆ.ಲೇಔಟ್ನ ಮಳೆ ನೀರು ಚರಂಡಿಯನ್ನು ಮುಚ್ಚಿಹಾಕಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿರುವುದು ಕಂಡು ಬಂತು. ಅಲ್ಲದೆ, ಶಾಸಕರು…