23 ವರ್ಷದ ತಷ್ಮಾ ಮುತ್ತಪ್ಪ ಸರ್ಕಾರಿ ಕೆಲಸಕ್ಕಾಗಿ ಪರದಾಟ ಕುಶಾಲನಗರ: ಕೊಡಗಿನಲ್ಲಿ ಸುರಿದ ಮರಣ ಮಳೆಯಿಂದ ಪ್ರವಾಹ ಸಂಭವಿಸಿ ಅಲ್ಲಿನ ಜನರು ಮನೆ, ಮಠ, ಜಾನುವಾರುಗಳನ್ನು ಕಳೆದುಕೊಂಡಿದ್ದಲ್ಲದೆ, ಕೆಲವರು ತಮ್ಮ ಜೀವನವನ್ನೇ ನಾಶಮಾಡಿಕೊಂಡಿದ್ದಾರೆ. ಅವರಲ್ಲಿ ಅಂತಾರಾಷ್ಟ್ರೀಯ ಥ್ರೋಬಾಲ್ ಆಟಗಾರ್ತಿ ತಷ್ಮಾ ಒಬ್ಬರು. ಅಂತಾರಾಷ್ಟ್ರೀಯ ಥ್ರೋಬಾಲ್ ಆಟಗಾರ್ತಿ ತಷ್ಮಾ ಮುತ್ತಪ್ಪ ಅವರು ಮಡಿಕೇರಿಯಲ್ಲಿದ್ದ ಮನೆಯನ್ನು ಕಳೆದು ಕೊಂಡು ನಿರಾಶ್ರಿತರಾಗಿದ್ದಾರೆ. ಅವರು ತಮ್ಮ ಜೀವನವನ್ನು ಪುನರ್ ನಿರ್ಮಿಸಿಕೊಳ್ಳಲು ಸಹಾಯ ಕೋರಿ ಕೆಲಸಕ್ಕಾಗಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆಗಸ್ಟ್ 15…