ಮೈಸೂರು: ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಕಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ 26 ಪ್ರತಿಭಾವಂತ ಶಿಕ್ಷಕರಿಗೆ ಜಿಲ್ಲಾ ಮಟ್ಟದ `ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಪ್ರದಾನ ಮಾಡಿದರು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಕರ ಮತ್ತು ಮಕ್ಕಳ ಕಲ್ಯಾಣ ನಿಧಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಡಾ. ಎಸ್.ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗ ವಾಗಿ 26…
ಕೆಲಸಕ್ಕೆ ಹೋಗುವ ಸಲುವಾಗಿಯೇ ಪೋಷಕರು ಮಕ್ಕಳನ್ನು ಬೇಬಿ ಸಿಟ್ಟಿಂಗ್ಗೆ ಸೇರಿಸುತ್ತಿದ್ದಾರೆ
September 6, 2018ಹೀಗಾಗಿ ತಂದೆ ತಾಯಿ-ಮಕ್ಕಳ ನಡುವೆ ಅಂತರವೇರ್ಪಡುತ್ತಿದೆ ಮೈಸೂರು ವಿವಿ ಶಿಕ್ಷಕರ ದಿನಾಚರಣೆಯಲ್ಲಿ ಡಾ.ಕೆ.ಎಸ್.ರವೀಂದ್ರನಾಥ್ ಬೇಸರ ಮೈಸೂರು: ಇಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಅಂತರ ಏರ್ಪಡುತ್ತಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಾದ್ಯಾಪಕ ಡಾ.ಕೆ.ಎಸ್.ರವೀಂದ್ರನಾಥ್ ಬೇಸರ ವ್ಯಕ್ತಪಡಿಸಿದರು. ಶಿಕ್ಷಕರ ದಿನಾಚರಣೆ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ತತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕøತಿ ಕೇಂದ್ರ ಬುಧವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ `ಸಮಾಜದಲ್ಲಿ ಶಿಕ್ಷಕರ ಪಾತ್ರ ಮತ್ತು ಪ್ರಾಮುಖ್ಯತೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕೆಲಸಕ್ಕೆ…
ದೇಶದ ಪುನರ್ ನಿರ್ಮಾಣ ಶಿಕ್ಷಕರ ಹೊಣೆ
September 6, 2018ಮೈಸೂರು: ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಸಮರ್ಥವಾಗಿ ಬಳಸಿಕೊಂಡು ದೇಶದ ಪುನರ್ ನಿರ್ಮಾಣ ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ನರಹರಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಭಾರತ ವನ್ನು ಪುನರ್ ನಿರ್ಮಾಣ ಮಾಡುವ ಕೆಲಸ ಶಿಕ್ಷಕರ ಮೇಲಿದ್ದು, ನಾವೆಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿದರೆ ದೇಶ ಕಟ್ಟುವ ಕೆಲಸ…
ವಿರಾಜಪೇಟೆಯಲ್ಲಿ ಶಿಕ್ಷಕರ ದಿನಾಚರಣೆ
September 6, 2018ವೀರಾಜಪೇಟೆ: ವಿದ್ಯಾರ್ಥಿಗಳ ಜೀವನದ ಕನಸನ್ನು ಶಿಕ್ಷಕರುಗಳು ಸಾರ್ಥಕ ಪಡಿಸುವ ಮೂಲಕ ಶಿಸ್ತು ಮತ್ತು ಉತ್ತಮ ನಡತೆಯನ್ನು ನೀಡುವಂತಾಗಬೇಕು ಎಂದು ಜಿಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧಕ್ಷ ಕಿರಣ್ ಕಾರ್ಯಪ್ಪ ಹೇಳಿದರು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿರಾಜ ಪೇಟೆ ತಾಲೂಕು ಶಿಕ್ಷಕರುಗಳಿಗೆ ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲಾ ಸಭಾಂ ಗಣದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಾ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನ ರೂಪಿಸುವಂತ ಮಹತ್ವವಾದ ಕಾರ್ಯ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ನೀಡುವಂತಾಗಬೇಕು…
ಇಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
September 5, 2018ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಚಾಮರಾಜನಗರ ತಾಲೂಕು: ಎಂ. ಡಿ. ಮಹದೇವಯ್ಯ, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಯಡಪುರ, ಗುಂಡ್ಲುಪೇಟೆ ತಾಲೂಕು: ಜಯರಾಮು, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಟಿಪುರ,…