ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆರ್.ಮಹೇಶ್ 306 ಮತಗಳ ಅಂತರ ದಲ್ಲಿ ಜಯಭೇರಿ ಭಾರಿಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅವ ರನ್ನು ಬೆಂಬಲಿಸಿ ಆರ್.ಮಹೇಶ್ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ತಮ್ಮ ತಾಪಂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರ ವಾದ ಸ್ಥಾನಕ್ಕೆ ಈ ಹಿನ್ನೆಲೆಯಲ್ಲಿ ಅ.28 ರಂದು ಉಪಚುನಾವಣೆ ನಡೆದಿತ್ತು. ಇಂದು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಪ್ರತಿಸ್ಪರ್ಧಿ ಕಾಂಗ್ರೆಸ್ನ…
ತೆರಕಣಾಂಬಿ ತಾಪಂ ಉಪ ಚುನಾವಣೆ: ಶೇ.73ರಷ್ಟು ಮತದಾನ
October 29, 2018ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಉಪ ಚುನಾವಣೆಯಲ್ಲಿ ಶೇ.73ರಷ್ಟು ಮತದಾನವಾಗಿದೆ. ತಾಲೂಕು ಪಂಚಾಯಿತಿ ಸದಸ್ಯ ಮಹೇಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಬಿಜೆಪಿ ಅಭ್ಯರ್ಥಿ ಮಹೇಶ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಾರಾಯಣನಾಯ್ಕರ ನಡುವೆ ನೇರ ಸ್ಪರ್ಧೆ ಏರ್ಪಟಿದ್ದು, ಒಟ್ಟು 7,980 ಮತದಾರರ ಪೈಕಿ 5,856 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ತೆರಕಣಾಂಬಿ ತಾಪಂ ಕ್ಷೇತ್ರ ವ್ಯಾಪ್ತಿಯ ಲಕ್ಕೂರು, ಗುರುವಿನಪುರ, ತೆರಕಣಾಂಬಿ ಹಾಗೂ ತೆರಕಣಾಂಬಿ ಹುಂಡಿ ಗ್ರಾಮಗಳಲ್ಲಿ ಬೆಳಗಿನಿಂದಲೇ ಬಿರುಸಿನ ಮತದಾನ ನಡೆಯಿತು. ಯುವಕ, ಯುವತಿಯರು,…
ತೆರಕಣಾಂಬಿಯಲ್ಲಿ ಮನೆಗೆ ಬೆಂಕಿ
July 12, 2018ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟಿನಿಂದ ಮನೆಯೊಂದರಲ್ಲಿದ್ದ ಬಹುತೇಕ ಪದಾರ್ಥಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ನಾಗೇಶ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟಿನಿಂದ ಬೆಂಕಿಹೊತ್ತಿಕೊಂಡಿದೆ. ಅಕ್ಕಪಕ್ಕದ ಮನೆಯವರು ನೀರು ಎರಚಿ ನಂದಿಸಲೆತ್ನಿಸಿದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬರುವ ವೇಳೆಗೆ ಮನೆಯಲ್ಲಿದ್ದ ಟಿ.ವಿ., ಫ್ರಿಜ್ಡ್, ವಾಷಿಂಗ್ ಮಿಷನ್, ಎರಡು ಅಲ್ಮೇರಾಗಳು, ಬಟ್ಟೆ-ಬರೆಗಳು ಹಾಗೂ ಆಹಾರ ಪದಾರ್ಥಗಳು ಸಂಪೂರ್ಣ ಭಸ್ಮವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿಗಳ…