ಮಡಿಕೇರಿ: ಕೊಡಗಿನ ಜನರ ವಿರೋಧದ ನಡುವೆಯೂ ಕೊಡಗು ಜಿಲ್ಲೆಯ ಮೂಲಕ ಸಾಗುವ ಮೈಸೂರು-ತಲಚೇರಿ ರೈಲು ಮಾರ್ಗಕ್ಕೆ ದಕ್ಷಿಣ ಕೊಡಗಿನಲ್ಲಿ ಸರ್ವೆ ಕಾರ್ಯ ನಡೆಸಿ ರುವ ಕ್ರಮವನ್ನು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹಾಗೂ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರುಗಳು, ದಕ್ಷಿಣ ಕೊಡಗಿನಲ್ಲಿ ರೈಲು ಮಾರ್ಗ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ತಿಳಿಸಿದ್ದಾರೆ. ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿ ರೈಲು ಮಾರ್ಗ ನಿರ್ಮಾಣ ಮಾಡಲು…