ಮೈಸೂರು: ತೋಂಟದಾರ್ಯ ಅಭಿನಂದನಾ ಸಮಿತಿ ವತಿಯಿಂದ ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಹಿರಿಯ ವಕೀಲ ತೋಂಟದಾರ್ಯ ಅವರನ್ನು ಮಂಗಳ ವಾರ ಅಭಿನಂದಿಸಲಾಯಿತು. ಮೈಸೂರಿನ ವಿಜಯನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಜಯಪುರದ ಶ್ರೀ ಜ್ಞಾನಯೋಗಾ ಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸಮ್ಮುಖ ಮತ್ತು ವಿವಿಧ ಕ್ಷೇತ್ರಗಳ ಗಣ್ಯರು, ಹಿತೈಷಿ ಗಳು ಹಾಗೂ ಅಭಿಮಾನಿಗಳ ಉಪಸ್ಥಿತಿ ಯಲ್ಲಿ ಪತ್ನಿ ಡಾ.ಕಮಲಾಕುಮಾರಿ ಅವ ರೊಂದಿಗೆ ತೋಂಟದಾರ್ಯ ಅವರನ್ನು ಆತ್ಮೀಯವಾಗಿ…