ಬೆಳಗಾವಿ: ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ. ನಮ್ಮ ಕುಟುಂಬ, ಪರಿ ವಾರಕ್ಕೆ ಟಿಪ್ಪು ಸುಲ್ತಾನ್ ಸಾಕಷ್ಟು ತೊಂದರೆ ನೀಡಿದ್ದ ಎಂದು ಮೈಸೂರಿನ ರಾಜ ಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಕೆಎಲ್ಇ ಫಿಸಿಯೋಥೆರಪಿ ಕೇಂದ್ರವನ್ನು ಉದ್ಘಾ ಟಿಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಪ್ರಮೋದಾದೇವಿ, ಸರ್ಕಾರ ಏಕೆ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ, ಇದರ ಹಿಂದಿನ ಉದ್ದೇಶವೇನೆಂದು ನಮಗೆ ತಿಳಿಯುತ್ತಿಲ್ಲ. ಇದಕ್ಕೆ ನಮ್ಮ ಬೆಂಬಲವೂ ಇಲ್ಲ ಎಂದಿದ್ದಾರೆ. “ಟಿಪ್ಪು ಜಯಂತಿಯನ್ನು ಸರ್ಕಾರ ಯಾವ ಕಾರಣಕ್ಕಾಗಿ ಆಚರಿಸುತ್ತಿದೆ? ಅವನು ನಮ್ಮ…
ಟಿಪ್ಪು ಜಯಂತಿ ವಿರುದ್ಧ ಕೊಡಗಲ್ಲಿ ಕರಾಳ ದಿನಾಚರಣೆ
November 11, 2018ಮಡಿಕೇರಿ: ರಾಜ್ಯ ಸರಕಾರದ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಕರೆ ನೀಡಿದ್ದ ಕೊಡಗು ಬಂದ್ಗೆ ನಗರದಲ್ಲಿ ಉತ್ತಮ ಸ್ಪಂದನೆ ಕಂಡು ಬಂತು. ಜನರು ಕೂಡ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್ಗೆ ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಕರಾಳ ದಿನ ಆಚರಿಸುವ ಮೂಲಕ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿದರು. ಕುಟ್ಟಪ್ಪ ಸ್ಮರಣೆ-ಬಂಧನ: 2015ರಲ್ಲಿ ಮಡಿಕೇರಿಯಲ್ಲಿ…
ಸಿಎಂ, ಡಿಸಿಎಂ ಗೈರಿಗೆ ಶಾಸಕ ತನ್ವೀರ್ ಅಸಮಾಧಾನ
November 11, 2018ಮೈಸೂರು: ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಾಗಿರುವುದಕ್ಕೆ ಶಾಸಕ ತನ್ವೀರ್ ಸೇಠ್, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ವೈದ್ಯರ ಸಲಹೆಯಂತೆ ವಿಶ್ರಾಂತಿ ನೆಪದಲ್ಲಿ ಮುಖ್ಯ ಮಂತ್ರಿಗಳು ಗೈರಾದರೆ, ವಿದೇಶ ಪ್ರಯಾಣ ಕಾರಣ ಹೇಳಿ ಉಪ ಮುಖ್ಯಮಂತ್ರಿಗಳು ತಪ್ಪಿಸಿ ಕೊಂಡಿದ್ದಾರೆ. ಇದರಿಂದ ಮುಸ್ಲಿಂ ಸಮುದಾಯಕ್ಕೆ ಅಪಮಾನವಾಗಿದೆ ಎಂದರು. ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿರುವುದು ಸತ್ಯ. ಆದರೆ…
ಟಿಪ್ಪು ಜಯಂತಿ ವಿರೋಧಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ
November 9, 2018ವಿರಾಜಪೇಟೆ: ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಹಾಗೂ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷದ್ ವತಿಯಿಂದ ವಿರಾಜಪೇಟೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಪ್ಪು ಪಟ್ಟಿ ಧರಿಸಿ ಸಂಘಟನೆಗಳ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರ ರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಯಾವುದೇ ಜನಾಂಗದ ವಿರುದ್ಧ ನಾವು ಅಪಪ್ರಚಾರ ಮಾಡಿಲ್ಲ. ಕೊಡಗಿನ ಪುಣ್ಯ ಕ್ಷೇತ್ರಗಳನ್ನು ನಾಶ…
ಇಂದಿನಿಂದ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ
November 9, 2018ಮಡಿಕೇರಿ: ಟಿಪ್ಪು ಜಯಂತಿ (ಶನಿವಾರ) ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ನವೆಂಬರ್ 9 ರ ಸಂಜೆ 6 ಗಂಟೆಯಿಂದ ನವೆಂಬರ್ 11 ಬೆಳಿಗ್ಗೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಅವಧಿಯಲ್ಲಿ ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ,…
2015ರ ಟಿಪ್ಪು ಜಯಂತಿ ಘರ್ಷಣೆ ಹಿಂದಿನ ಎಸ್ಪಿ ವರ್ತಿಕಾ ಕಟಿಯಾರ್ಗೆ ಕ್ಲೀನ್ಚಿಟ್
May 27, 2018ಮಡಿಕೇರಿ: ಕೊಡಗು 2015 ರಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಕೋಮು ಘರ್ಷಣೆಯಲ್ಲಿ ಕರ್ತವ್ಯ ಲೋಪ ಆರೋಪ ಎದುರಿಸಿದ್ದ ಆಗಿನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಗೃಹ ಇಲಾಖೆ ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಕಳೆದ 3 ವರ್ಷಗಳ ಹಿಂದೆ ನಡೆದ ಟಿಪ್ಪು ಜಯಂತಿ ಆಚರಣೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಕುಟ್ಟಪ್ಪ ಮಡಿಕೇರಿ ಜಿಲ್ಲೆ ಆಸ್ಪತ್ರೆಯ ಆವರಣದಲ್ಲಿ ಮೃತ ಪಟ್ಟಿದ್ದರು. ಆ ಬಳಿಕ ನೀರುಕೊಲ್ಲಿ ಬಳಿ ಟಿಪ್ಪು ಜಯಂತಿ ಆಚರಿಸಿ…