ಬೆಂಗಳೂರು: ಕೇಂದ್ರದ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ, ಇಂದು ಕರೆಯಲಾಗಿದ್ದ ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಕೆಲವು ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ, ಪ್ರತಿಭಟನೆ ವ್ಯಕ್ತಪಡಿಸಿದರು. ಆದರೆ ಈ ಪ್ರತಿಭಟನೆ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆ ಉಂಟಾಗಲಿಲ್ಲ. ರಾಜ್ಯದ ಎಲ್ಲೆಡೆ ಸಾರಿಗೆ ಸಂಚಾರ ಎಂದಿನಂತೆ ಇತ್ತು. ರಾಜಧಾನಿ ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ಬೆಳಿಗ್ಗೆ ಯಿಂದಲೇ ಸಂಚರಿಸಿದವು. ಆಟೋ, ಟ್ಯಾಕ್ಸಿಗಳು ಮಾಮೂಲಿಯಂತೆ ಗ್ರಾಹಕ ರಿಗೆ…
ಹಾಸನ
ಬಂದ್ಗೆ ಹಾಸನದಲ್ಲಿ ನೀರಸ ಪ್ರತಿಕ್ರಿಯೆ
August 8, 2018ಹಾಸನ: ಕೇಂದ್ರ ಜಾರಿಗೊಳಿಸುತ್ತಿರುವ ಮೋಟಾರು ವಾಹನ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಕರೆ ನೀಡಿದ್ದ ಬಂದ್ಗೆ ಹಾಸನದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಎಸ್ಆರ್ಟಿಸಿ, ನಗರ ಸಾರಿಗೆ ಬಸ್ಗಳು, ಆಟೋ ಸೇರಿದಂತೆ ಇತರೆ ವಾಹಣಗಳು ಎಂದಿನಂತೆ ಸಂಚರಿಸಿದವು. ಜನ ಜೀವನ ಎಂದಿನಂತಿತ್ತು. ಅಂಗಡಿ ಮುಂಗಟ್ಟುಗಳು ತೆರದಿದ್ದವು. ಕೆಎಸ್ಆರ್ಟಿಸಿ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಂಜುನಾಥ್ ಜು.3ರಂದು ಸುದ್ದಿಗೋಷ್ಠಿ ನಡೆಸಿ ಮುಷ್ಕರಕ್ಕೆ ಬೆಂಬಲಿಸಲು ಮನವಿ ಮಾಡಿದ್ದರು. ಆದರೆ ಹಾಸನದ ಸಾರಿಗೆ ಸಂಬಂಧಿತ ಸಂಘಟನೆಗಳು ಬಂದ್ಗೆ ಬೆಂಬಲ ನೀಡದೇ ಎಂದಿನಂತೆ…