ನವದೆಹಲಿ: ನಿರೀಕ್ಷೆ ಯಂತೆಯೇ ಇಂದು ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಲಾಗಿದ್ದು, ಸರ್ಕಾರದ ತಿದ್ದು ಪಡಿ ಮಸೂದೆಗೆ ಮತ್ತೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಲೋಕಸಭೆಯಲ್ಲಿ ತ್ರಿವಳಿ ತಲಾಖ್ 2019 ಮಸೂದೆಯನ್ನು ಮಂಡಿಸಿದರು. ಈ ವೇಳೆ ಪ್ರಜೆಗಳು ತಮಗಾಗುತ್ತಿರುವ ಸಮಸ್ಯೆಗಳ ವಿರುದ್ಧ ಕಾನೂನು ರಚನೆ ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಕಾನೂನು ರಚಿ ಸುವುದು ನಮ್ಮ ಕರ್ತವ್ಯ. ತ್ರಿವಳಿ ತಲಾಖ್ ಕಾನೂನು ಅದರ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುತ್ತದೆ ಎಂದರು….
ಮೈಸೂರು
ಲೋಕಸಭೆಯಲ್ಲಿ ಐತಿಹಾಸಿಕ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಂಗೀಕಾರ
December 28, 2018ನವದೆಹಲಿ: ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ಐತಿ ಹಾಸಿಕ ತ್ರಿವಳಿ ತಲಾಖ್ ಮಸೂದೆ ಗುರುವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ತ್ರಿವಳಿ ತಲಾಖ್ ಮಸೂದೆ ಯನ್ನು ಮಂಡಿಸಿದರು. ಸುದೀರ್ಘ ಚರ್ಚೆಯ ನಂತರ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ವಿಧೇಯಕದ ಪರವಾಗಿ 245 ಮತ ಹಾಗೂ ವಿಧೇಯಕದ ವಿರುದ್ಧವಾಗಿ ಕೇವಲ 11 ಮತ ಚಲಾವಣೆಯಾದವು. ತ್ರಿವಳಿ ತಲಾಖ್ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್…