Tag: Tumkur

ದೇವೇಗೌಡರದ್ದು ರಾಕ್ಷಸ ಕುಟುಂಬ…!?
ಮೈಸೂರು

ದೇವೇಗೌಡರದ್ದು ರಾಕ್ಷಸ ಕುಟುಂಬ…!?

March 22, 2019

ತುಮಕೂರು: “ದೇವೇಗೌಡರದ್ದು ರಾಕ್ಷಸ ಕುಟುಂಬವಿದ್ದಂತೆ. ಅವರು ಯಾವುದಕ್ಕೂ ಹೆದರುವುದಿಲ್ಲ. ಗೆಲ್ಲಲಿ, ಸೋಲಲಿ ಹೋರಾಟ ಮಾಡುತ್ತಾರೆ,” ಎಂದು ಅವರನ್ನು ಹೊಗಳುವ ಭರದಲ್ಲಿ ಜೆಡಿಎಸ್ ಸಚಿವ ಶ್ರೀನಿವಾಸ್ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಲು ದೇವೇಗೌಡರು ಹೆದರುತ್ತಾರೆ. ಇದರಿಂದಾಗಿ ತುಮಕೂರಿನಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಬಿಜೆಪಿ ಟೀಕಿಸಿತ್ತು. ಈ ಹೇಳಿಕೆಗೆ ತಿರುಗೇಟು ನೀಡಲು ಮುಂದಾದ ಅವರು, ದೇವೇಗೌಡ ಅವರ ಕುಟುಂಬಕ್ಕೆ ಬೈದರಾ ಅಥವಾ ಹೊಗಳಿದರಾ ಎಂಬ ಪ್ರಶ್ನೆ ಮಾಧ್ಯಮದವರಲ್ಲೇ ಉದ್ಭವಿಸಿದೆ. ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧೆ ಮಾಡು…

ಕಾಯಕ ಯೋಗಿ ಶಿವನಲ್ಲಿ ಐಕ್ಯ
ಮೈಸೂರು

ಕಾಯಕ ಯೋಗಿ ಶಿವನಲ್ಲಿ ಐಕ್ಯ

January 23, 2019

ಗುರು ಉದ್ಧಾನ ಶ್ರೀ ಗದ್ದುಗೆ ಸಮೀಪವೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾಧಿ ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ ಬೆಳಿಗ್ಗೆ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ಧಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿ ಅವರನ್ನು ಗದ್ದುಗೆಯಲ್ಲಿ ಐಕ್ಯಗೊಳಿಸಲಾಗಿದೆ. ಕ್ರಿಯಾ ಸಮಾಧಿ: ಮಂಗಳವಾರ ಸಂಜೆ 4.30ರ ವೇಳೆಗೆ ಆರಂಭವಾದ ಕ್ರಿಯಾ…

ಮೂರೂವರೆ ದಶಕದ ಹಿಂದೆಯೇ ನಿರ್ಮಾಣವಾಗಿತ್ತು ಸಮಾಧಿ ಭವನ
ಮೈಸೂರು

ಮೂರೂವರೆ ದಶಕದ ಹಿಂದೆಯೇ ನಿರ್ಮಾಣವಾಗಿತ್ತು ಸಮಾಧಿ ಭವನ

January 23, 2019

ತುಮಕೂರು: ಸೋಮವಾರ ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿಗೆ ಮೂರು ದಶಕಗಳ ಹಿಂದೆಯೇ ಜಾಗ ನಿಗದಿಯಾಗಿ, ಸಮಾಧಿ ಭವನವನ್ನು ನಿರ್ಮಿಸಲಾಗಿದೆ. 1982ರಲ್ಲೇ ಕಾಯಕ ಯೋಗಿಯ ಸಮಾಧಿಗೆ ಸ್ಥಳ ನಿಗದಿ ಮಾಡಿ ಸುಮಾರು 3 ಕೋಟಿ ರೂ.ಗಳ ವೆಚ್ಚದಲ್ಲಿ ಸಮಾಧಿ ಭವನವನ್ನು ನಿರ್ಮಿಸಲಾಗಿದೆ. ಶ್ರೀ ಮಠದ ಆವರಣದಲ್ಲಿದ್ದ ಆಲದ ಮರ ಕಡಿದು ಭವನ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಆದರೆ ಶ್ರೀಗಳು ಆಲದಮರ ಕಡಿಯಲು ಒಪ್ಪಲಿಲ್ಲ. ಇದರಿಂದ ಈ ಸ್ಥಳ ನೆನೆಗುದಿಗೆ ಬಿದ್ದಿತು. ವಿಸ್ಮಯ ಎಂಬಂತೆ…

ಭಾರವಾದ ಮನಸ್ಸಿಂದ ಭಕ್ತಸಾಗರದ ಬೀಳ್ಕೊಡುಗೆ
ಮೈಸೂರು

ಭಾರವಾದ ಮನಸ್ಸಿಂದ ಭಕ್ತಸಾಗರದ ಬೀಳ್ಕೊಡುಗೆ

January 23, 2019

ಸಿದ್ಧಗಂಗೆ: ಶ್ರೀ ವಿಳಂಬಿನಾಮ ಸಂವತ್ಸರದ ಉತ್ತರಾಯಣ ಪುಣ್ಯಕಾಲ. ಹೇಮಂತ ಋತುವಿನ ಪಾಡ್ಯ ದಿನ. ಮಂಗಳವಾರ ಸಂಜೆ 5ರ ವೇಳೆ. ಪಶ್ಚಿಮ ದಿಗಂತದ ಅಂಚಿನತ್ತ ಸಾಗುತ್ತಿದ್ದ ಸೂರ್ಯ ನಿರ್ಗಮಿಸುವುದನ್ನೂ ಮರೆತು ಭುವಿಯತ್ತ ತಿರುಗಿ ಒಂದೆಡೆ ದಿಟ್ಟಿಸಿ ನೋಡುತ್ತಲೇ ಇದ್ದ. ತುಮಕೂರು ಜಿಲ್ಲೆಯ ಸಿದ್ಧಗಂಗೆಯ ಬೆಟ್ಟದ ಭಾರೀ ಬಂಡೆಗಳು, ಬೃಹತ್ ಕಟ್ಟಡಗಳ ನಡುವೆ ಮತ್ತೊಂದು ಸೂರ್ಯನ ಮೆರವಣಿಗೆ ನಿಧಾನವಾಗಿ ಸಾಗುತ್ತಿತ್ತು. ಬಗೆ ಬಗೆ ಹೂವುಗಳಿಂದ ಅಲಂಕೃತವಾದ ರುದ್ರಾಕ್ಷಿ ರಥದಲ್ಲಿ ಮಂದಸ್ಮಿತರಾಗಿ ಆಸೀನರಾಗಿದ್ದ ಕಾವಿಧಾರಿ ಸೂರ್ಯನ ತೇಜಸ್ಸು ಕಂಡು ರವಿತೇಜನೇ ಬೆರಗಾಗಿದ್ದ!…

ಎಲ್ಲರೂ ದಯವಿಟ್ಟು ಪ್ರಸಾದ ಸ್ವೀಕರಿಸಿ: ಭಕ್ತರಿಗೆ ಶ್ರೀಮಠದ ಮಕ್ಕಳ ಮನವಿ
ಮೈಸೂರು

ಎಲ್ಲರೂ ದಯವಿಟ್ಟು ಪ್ರಸಾದ ಸ್ವೀಕರಿಸಿ: ಭಕ್ತರಿಗೆ ಶ್ರೀಮಠದ ಮಕ್ಕಳ ಮನವಿ

January 23, 2019

ತುಮಕೂರು: ಸಿದ್ದಗಂಗೆಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು ಹೇಗೆ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದರೋ, ಅವರ ಮಠದ ಪುಟ್ಟ ವಿದ್ಯಾರ್ಥಿಗಳೂ ಅದೇ ಕಾಯಕವನ್ನು ಮುಂದುವರಿಸಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಬಂದ ಎಲ್ಲಾ ಭಕ್ತಾದಿಗಳೂ ನಂತರ ಶ್ರೀ ಮಠದಲ್ಲಿ ಪ್ರಸಾದ ಸ್ವೀಕರಿಸಿಯೇ ತೆರಳಬೇಕು. ಆ ಮೂಲಕ ಶ್ರೀಗಳ ಮನದಾಸೆಯನ್ನು ಪೂರೈಸಬೇಕು ಎಂದು ಮಠದ ಶಿಷ್ಯರು, ಶ್ರೀಗಳ ಅನುಯಾಯಿಗಳು ಭಕ್ತಾದಿಗಳಿಗೆ ಮೈಕ್ ಮೂಲಕ ವಿನಂತಿ ಮಾಡುತ್ತಿದ್ದರು. ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು….

109ನೇ ವಯಸ್ಸಿನವರೆಗೂ ಆಸ್ಪತ್ರೆ ಕಾಣದ ಶ್ರೀಗಳು
ಮೈಸೂರು

109ನೇ ವಯಸ್ಸಿನವರೆಗೂ ಆಸ್ಪತ್ರೆ ಕಾಣದ ಶ್ರೀಗಳು

January 23, 2019

ತುಮಕೂರು: ಜನರಿಂದ ಜನರಿಗಾಗಿ ಜೋಳಿಗೆ ಹಿಡಿದ ಮಹಾ ಯೋಗಿ ನಡೆದಾಡುವ ದೇವರು ತಮ್ಮ 109ನೇ ವರ್ಷದವರೆಗೂ ಆಸ್ಪತ್ರೆಯತ್ತ ಸುಳಿದಿರಲಿಲ್ಲ. ಶತಾ ಯುಷಿಯಾದರೂ ಆರೋಗ್ಯ ಕಾಪಾಡಿಕೊಂಡಿದ್ದ ಡಾ. ಶಿವಕುಮಾರ ಸ್ವಾಮೀಜಿ, ಒಂದು ಮಾತ್ರೆಯನ್ನೂ ಸಹ ಸೇವಿಸಿರಲಿಲ್ಲ. ಮಿತ ಆಹಾರ, ಎರಡು ಸೀಳು ಸೇಬು, ಬೇವಿನ ಕಷಾಯ ಸೇರಿದಂತೆ ಮಿತ ಆಹಾರ ದೊಂದಿಗೆ ಮಕ್ಕಳೊಂದಿಗೆ ಲವಲವಿಕೆ ಯಿಂದಲೇ ಇದ್ದರು. 109ನೇ ವಯಸ್ಸಿನ ನಂತರ ವಯೋಸಹಜ ಸಣ್ಣಪುಟ್ಟ ಸಮಸ್ಯೆಗಳಿಗೆ ಮಾತ್ರೆಗಳನ್ನು ಸೇವಿಸ ಲಾರಂಭಿಸಿದರು. ಕಾಲ ಕಳೆದಂತೆ 111ನೇ ವಯಸ್ಸಿಗೆ ಶ್ರೀಗಳು ಶ್ವಾಸ…

ಉತ್ತರಾಧಿಕಾರಿ ಸಿದ್ದಲಿಂಗ ಸ್ವಾಮೀಜಿ ಅವರಿಗೆ ನಡೆದಾಡುವ ದೇವರ ಸಂದೇಶವಿದು…
ಮೈಸೂರು

ಉತ್ತರಾಧಿಕಾರಿ ಸಿದ್ದಲಿಂಗ ಸ್ವಾಮೀಜಿ ಅವರಿಗೆ ನಡೆದಾಡುವ ದೇವರ ಸಂದೇಶವಿದು…

January 23, 2019

ತುಮಕೂರು: ಕಳೆದ 2011 ರಲ್ಲಿ ಕಿರಿಯ ಶ್ರಿಗಳಿಗೆ ಶ್ರೀ ಸಿದ್ಧಗಂಗಾ ಮಠದ ಅಧಿಕಾರ ಹಸ್ತಾಂ ತರಿಸಿದ ವೇಳೆ ಶ್ರೀ ಶಿವಕುಮಾರ ಸ್ವಾಮೀಜಿ ಅವರು ನೀಡಿದ ಆಶೀರ್ವಚನದ ಪೂರ್ಣ ಪಾಠವಿದು: “ಭಗವಂತನ ಸೃಷ್ಟಿಯಲ್ಲಿ ಮನುಷ್ಯನಿಗೆ ಶ್ರೇಷ್ಠವಾದ ಸ್ಥಾನವಿದೆ. ಅದನ್ನು ಅರಿತು ನಡೆದು ಕೊಂಡರೆ ಸಮಾಜ ದಲ್ಲಿ ಶಾಂತಿ ನೆಲೆಸುತ್ತದೆ. ಮನುಷ್ಯತ್ವ ಬೆಳೆಯಲು ಧರ್ಮ ಪೀಠಗಳು ನೆರವಾಗಬೇಕು. ಭಕ್ತರಲ್ಲಿ ಸಮಾಜಮುಖಿ ಭಾವನೆ ಬೆಳೆಸುವುದು ಧರ್ಮಪೀಠಗಳ ಕರ್ತವ್ಯ. ಭ್ರಷ್ಟಾಚಾರದ ಪಿಡುಗು ತೊಲಗಿಸಲು ಕೇವಲ ಕಾನೂನಿನಿಂದ ಸಾಧ್ಯವಿಲ್ಲ. ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ವಯಸ್ಸಿನಿಂದಲೇ…

ನಡೆದಾಡುವ ದೇವರು ಲಿಂಗೈಕ್ಯ
ಮೈಸೂರು

ನಡೆದಾಡುವ ದೇವರು ಲಿಂಗೈಕ್ಯ

January 22, 2019

ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಅಭಿನವ ಬಸವಣ್ಣ ಎಂದೇ ಹೆಸರುವಾಸಿಯಾಗಿದ್ದ ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ. ಶಿವಕುಮಾರಸ್ವಾಮೀಜಿ ಇಂದು ಶಿವ ಸಾನಿಧ್ಯ ಸೇರಿದರು. ಕಳೆದ ಕೆಲವು ದಿನಗಳಿಂದ ಶ್ರೀಗಳು ಅಸ್ವಸ್ಥರಾಗಿದ್ದು, ಇಂದು ಬೆಳಿಗ್ಗೆ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದರು ಎಂದು ಮಠದ ಆಡಳಿತ ಮಂಡಳಿ ಪ್ರಕಟಿಸಿದೆ. ತಮ್ಮ 111ನೇ ವಯಸ್ಸಿ ನಲ್ಲೂ ಸೇವಾ ಚೈತನ್ಯದ ಚಿಲುಮೆಯಾಗಿದ್ದ ಶ್ರೀಗಳ ನಿಧನ ಸುದ್ದಿಯನ್ನು ಖುದ್ದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಮಠದ ಆವರಣದಲ್ಲಿ ಪ್ರಕಟಿಸಿದರು. ಕ್ರಿಯಾಸಮಾಧಿಯ…

25 ವರ್ಷ ಹುಟ್ಟೂರಿಗೆ ಕಾಲಿಡಲಿಲ್ಲ…!
ಮೈಸೂರು

25 ವರ್ಷ ಹುಟ್ಟೂರಿಗೆ ಕಾಲಿಡಲಿಲ್ಲ…!

January 22, 2019

ತುಮಕೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ತಮ್ಮ ಜೀವನದಿಂದಲೇ ಎಲ್ಲರಿಗೂ ಆದರ್ಶವಾಗಿದ್ದವರು. ಆದರೆ ಅಂತಹ ಸ್ವಾಮೀಜಿಗಳೂ ತಮ್ಮ ಪೋಷಕರ ಮೇಲಿನ ಬೇಸರದಿಂದ 25 ವರ್ಷ ಹುಟ್ಟೂರಿಗೆ ಕಾಲಿಡಲಿಲ್ಲ ಎನ್ನುವುದು ಅಚ್ಚರಿಯ ಸತ್ಯ. ಶಿವಕುಮಾರ ಸ್ವಾಮಿಗಳು ತಾವು ಹುಟ್ಟಿದ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರಕ್ಕೆ 25 ವರ್ಷ ಬಂದಿರಲಿಲ್ಲ.ತಮ್ಮ ಗುರುವಾಗಿದ್ದ ಉದ್ದಾನ ಶಿವಯೋಗಿಗಳ ಮೇಲಿನ ಅಪಾರ ಭಕ್ತಿ ಅವರ ಈ ನಿರ್ಧಾರದ ಹಿಂದಿತ್ತು. ಬಿಎ ಓದಿದ್ದ ಮಗ ಶಿವಣ್ಣ ಉನ್ನತ ಸರ್ಕಾರಿ ಅಧಿಕಾರಿಯಾಗಬೇಕು ಎನ್ನುವುದು ಅವರ ತಂದೆ…

ಹಳ್ಳಿಯಿಂದ ಬಂದು ಸೇವೆಯ ಶಿಖರವೇರಿದ ಕಾಯಕ ಯೋಗಿ…
ಮೈಸೂರು

ಹಳ್ಳಿಯಿಂದ ಬಂದು ಸೇವೆಯ ಶಿಖರವೇರಿದ ಕಾಯಕ ಯೋಗಿ…

January 22, 2019

ಬೆಂಗಳೂರು: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ, ಸಿದ್ಧಗಂಗೆಯ ಮಹಾಯೋಗಿ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು. ಶಿವಗಂಗೆಯ ಬೆಟ್ಟದ ತಪ್ಪಲಿನಲ್ಲಿರುವ ಈ ಹಳ್ಳಿಗೆ ನಾಡಿನ ಭೂಪಟದಲ್ಲಿ ವಿಶೇಷ ಸ್ಥಾನಮಾನವಿದೆ. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಯ 13 ಮಕ್ಕಳಲ್ಲಿ ಒಬ್ಬರಾದ ಶಿವಣ್ಣ, ಏಪ್ರಿಲ್ 1, 1907 ರಲ್ಲಿ ಜನ್ಮ ತಳೆದರು. ವೀರಾಪುರ, ಪಾಲನಹಳ್ಳಿಯಲ್ಲಿ ಬಾಲ್ಯ ಕಳೆದ ನಂತರ ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ. 1919ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆ, 1921ರಲ್ಲಿ ಇಂಗ್ಲೀಷ್ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು. ಅಣ್ಣ…

1 2
Translate »