ಮೈಸೂರು: ಮಾನ್ಯತೆ ರದ್ದುಗೊಳಿಸಿದ್ದರಿಂದ ಕಳೆದ ಮೂರು ವರ್ಷಗಳಿಂದ ಚಟುವಟಿಕೆ ಸ್ಥಗಿತಗೊಂಡು, ಸದಾ ಬಿಕೋ ಎನ್ನುತ್ತಿದ್ದ ಮೈಸೂರಿನ ಮಾನಸಗಂಗೋತ್ರಿ ಆವರಣದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲೀಗ ಸಂತಸ ಮನೆ ಮಾಡಿದೆ. ವಿಜ್ಞಾನ ವಿಷಯಗಳನ್ನೊರತುಪಡಿಸಿ ಇತರ 17 ಕೋರ್ಸುಗಳಿಗೆ ಯುಜಿಸಿ ಮಾನ್ಯತೆ ನೀಡಿ ಗುರುವಾರ ಅಧಿಸೂಚನೆ ಪ್ರಕಟಿಸುತ್ತಿದ್ದಂತೆಯೇ ಮುಕ್ತ ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮೊಗದಲ್ಲಿ ನಗೆ ಬೀರಿದೆ. ಕಳೆದ ಮೂರು ವರ್ಷಗಳಿಂದ ಪಾಠ ಪ್ರವಚನಗಳು, ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತವಾಗಿದ್ದ ಕಾರಣ ಸಿಬ್ಬಂದಿ ಹಾಗೂ ಪ್ರಾಧ್ಯಾಪಕರು ಚಿಂತೆಗೀಡಾಗಿದ್ದರು. ಹೊಸ…