ಮೈಸೂರು: ಮೈಸೂರು ನಗರ ಮತ್ತು ತಾಲೂಕಿನ 92 ಹಳ್ಳಿಗಳಿಗೆ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಹಳೇ ಉಂಡವಾಡಿ ಬಳಿ ಕಾವೇರಿ ನದಿ ಯಿಂದ ಹೆಚ್ಚುವರಿ ಯಾಗಿ 300 ಎಂ.ಎಲ್.ಡಿ. ನೀರನ್ನು ಸರಬರಾಜು ಮಾಡುವ ಯೋಜನೆಗೆ ಪ್ರಾರಂಭಿಕವಾಗಿ ಬಜೆಟ್ನಲ್ಲಿ 50 ಕೋಟಿ ಹಣ ವನ್ನು ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡರು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. 2006 ರಲ್ಲಿ ಜಿಟಿಡಿ ಅವರ ಕೋರಿಕೆಯಂತೆ ಅಂದೂ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು…