ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯ ಆವರಣದಲ್ಲಿರುವ ಸವಾರಿ ತೊಟ್ಟಿಯಲ್ಲಿ ಸೋಮವಾರ ನಡೆದ ಮೈನವಿರೇಳಿಸುವ ಜೆಟ್ಟಿಗಳ ಕಾಳಗ ಆರಂಭವಾದ ಒಂದೂವರೆ ನಿಮಿಷದಲ್ಲಿಯೇ ಚಾಮರಾಜನಗರದ ಜೆಟ್ಟಿಯ ತಲೆ, ಕೆನ್ನೆಯಿಂದ ರಕ್ತ ಚಿಮ್ಮುವ ಮೂಲಕ ಅಂತ್ಯಗೊಂಡಿತು. ಸಂಪ್ರದಾಯದಂತೆ ಜಂಬೂಸವಾರಿಯ ದಿನ ಜೆಟ್ಟಿ ಕಾಳಗ ನಡೆಯಬೇಕಾಗಿತ್ತು. ಆದರೆ ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಪುಟ್ಟ ರತ್ನಮ್ಮಣ್ಣಿ ಹಾಗೂ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಸಹೋದರಿ ವಿಶಾಲಾಕ್ಷಿದೇವಿ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜೆಟ್ಟಿ ಕಾಳಗವನ್ನು ಅರಮನೆಯ ಪುರೋಹಿ ತರ ಸಲಹೆ ಮೇರೆಗೆ…