ಮೈಸೂರು: ಗೌರವ ಡಾಕ್ಟರೇಟ್ ಪದವಿ ಪಡೆದಿರುವ ತಿ.ನರಸೀಪುರ ತಾಲೂಕಿನ ವಾಟಾಳು ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕರ್ನಾಟಕ ಇತಿಹಾಸ್ ಸಾಂಸ್ಕೃತಿಕ ಕಲಾ ಸಂಸ್ಥೆಯು ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸನ್ಮಾನಿಸಿತು. ಈ ಸಂದರ್ಭಧಲ್ಲಿ ಮಾತನಾಡಿದ ಶ್ರೀಗಳು, ಸಂಸ್ಥೆಯು, ಮಠದ ಸಂಪ್ರದಾಯ, ಪರಂಪರೆಯಂತೆ ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಸಮ ಭಾವನೆಯಿಂದ ಪೋಷಿಸುತ್ತಿದೆ. ನೊಂದವರು ಮತ್ತು ಅಬಲರಿಗೆ ಊಟ, ವಸತಿ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಮಠ ನೀಡಿರುವ ಸೇವೆಯನ್ನು ಪರಿಗಣಿಸಿ…