ಮೈಸೂರು: ಬದುಕಿನಲ್ಲಿ ಒಂದು ನಿರ್ದಿಷ್ಟ ಗುರಿ ಇಟ್ಟುಕೊಂಡು ಅಧ್ಯಯನ ಮಾಡಿ, ಯಶಸ್ಸು ಸಾಧಿಸಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಏರ್ಪಡಿಸಿದ್ದ 40ನೇ ವರ್ಷದ ಸಂಭ್ರಮಾಚರಣೆ ಹಾಗೂ ಸಹಪಠ್ಯ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳ ಬದುಕು ಸುಂದರವಾಗಿರಬೇಕಾದರೆ ನಿಮ್ಮಲ್ಲಿ ಶಿಸ್ತು, ತಾಳ್ಮೆ ಗುಣ, ನಡವಳಿಕೆ ಇರಬೇಕು. ಜೊತೆಗೆ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ…
ಮೈಸೂರು
ಭವಿಷ್ಯ ನಿರ್ಧರಿಸುವ ಶಿಕ್ಷಣವನ್ನು ಸಂತೋಷದಿಂದ ಕಲಿಯಿರಿ: ವಿದ್ಯಾರ್ಥಿಗಳಿಗೆ ಸಂಸದ ಪ್ರತಾಪ್ಸಿಂಹ ಸಲಹೆ
June 19, 2018ಮೈಸೂರು: ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ. ಆದರೆ ಎಲ್ಲಾ ಸಮಯದಲ್ಲೂ ಸಾಂಪ್ರದಾಯಿಕ ಶಿಕ್ಷಣ ಎನ್ನುವುದು ಸಿಗುವುದಿಲ್ಲವಾದ್ದರಿಂದ ನಿಮ್ಮ ಭವಿಷ್ಯ ನಿರ್ಧರಿಸುವ ಪದವಿ ಹಂತದ ವಿದ್ಯಾಭ್ಯಾಸವನ್ನು ಸಂತೋಷದಿಂದ ಕಲಿಯುವಂತೆ ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್ಸಿಂಹ ಇಂದಿಲ್ಲಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವಾಗ ಜೀವನದ ಜೊತೆ ಆಟವಾಡುತ್ತಾರೆ. ಆದರೆ ಕಾಲೇಜಿನ ಅಧ್ಯಯನದ ನಂತರ ಜೀವನ ಎನ್ನುವುದು ನಮ್ಮ ಜೊತೆ…