ಮೈಸೂರು: ಮೈಸೂರಿನ ಹೆಬ್ಬಾಳು ಬಳಿ ರಿಂಗ್ ರಸ್ತೆಯಲ್ಲಿ ನಡೆದ ಪೊಲೀಸ್ ಶೂಟೌಟ್ನಲ್ಲಿ ಬಲಿಯಾಗಿದ್ದ ಸುಕ್ವಿಂದರ್ ದೇಹವನ್ನು ಪೊಲೀಸ್ ಭಾರೀ ಬಿಗಿ ಭದ್ರತೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಇಂದು ಮಧ್ಯಾಹ್ನ ವಾರಸು ದಾರರಿಗೆ ಒಪ್ಪಿಸಲಾಯಿತು. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿರುವ ಶವಾಗಾರದಲ್ಲಿ ಮೈಸೂರಿನ 5ನೇ ಹೆಚ್ಚುವರಿ ಪ್ರಥಮ ದರ್ಜೆ ನ್ಯಾಯಾಧೀಶ (ಕಿರಿಯ ಶ್ರೇಣಿ) ಭೀಮಪ್ಪ ಎಸ್.ಪೌಲ್ ಹಾಗೂ ಮೈಸೂರು ತಾಲೂಕು ಅಡಿಷನಲ್ ತಹಸೀಲ್ದಾರ್ ಚಂದ್ರಕಾಂತ ಸಮ್ಮುಖದಲ್ಲಿ ದೇಹದ ಪಂಚನಾಮೆ (ಇನ್ಕ್ವೆಸ್ಟ್) ನಡೆದ ನಂತರ ಮರಣೋತ್ತರ…
ಶೂಟೌಟ್ ಪ್ರಕರಣ: ಸಿಐಡಿ ತನಿಖೆ
May 18, 2019ಮೈಸೂರು: ಗುರುವಾರ ಮೈಸೂರಿನಲ್ಲಿ ನಡೆದ ಶೂಟೌಟ್ನಲ್ಲಿ ಓರ್ವ ಬಲಿಯಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಇಂದು ಬೆಳಿಗ್ಗೆಯೇ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ಸಿಐಡಿ ತಂಡದ ಅಧಿಕಾರಿಗಳು ಮೈಸೂರಿಗೆ ಆಗಮಿಸಿದ್ದು, ಪ್ರಕರಣ ದಾಖಲಾಗಿರುವ ವಿಜಯನಗರ ಠಾಣೆಯಲ್ಲಿ ಸಂಬಂಧಿಸಿದ ದಾಖಲೆಗಳನ್ನು ಪಡೆದಿರುವ ಅವರು, ಠಾಣಾಧಿಕಾರಿಗಳಿಂದ ಘಟನೆ ಕುರಿತಂತೆ ಮಾಹಿತಿ ಸಂಗ್ರಹಿಸಿದರು. ಪ್ರಕರಣದ ಸಂಬಂಧ ದೂರು ನೀಡಿರುವ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್, ಬಾತ್ಮೀದಾರನೆನ್ನಲಾದ ವಿಜಯಕುಮಾರ್, ಘಟನೆ ನಡೆದಾಗ ಜೊತೆಯಲ್ಲಿದ್ದ ಎಎಸ್ಐ, ಇನ್ನಿತರೆ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿ, ಪ್ರಾಥಮಿಕ ಹಂತದ ಮಾಹಿತಿಯನ್ನು ಕಲೆ…
ಸುಕ್ವಿಂದರ್ ಮೃತದೇಹವಿರುವ ಶವಾಗಾರಕ್ಕೆ ಭಾರೀ ಭದ್ರತೆ
May 18, 2019ಮೈಸೂರು: ಪೊಲೀಸರ ಶೂಟೌಟ್ಗೆ ಬಲಿಯಾಗಿರುವ ಪಂಜಾಬ್ ಮೂಲದವನೆನ್ನಲಾದ ಸುಕ್ವಿಂ ದರ್ ದೇಹವಿರಿಸಿರುವ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರಕ್ಕೆ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಮಧ್ಯಾಹ್ನ 2.30 ಗಂಟೆ ವೇಳೆಗೆ ಕೆ.ಆರ್. ಆಸ್ಪತ್ರೆ ಅಪಘಾತ ತುರ್ತು ಚಿಕಿತ್ಸಾ ವಿಭಾಗ ದಿಂದ ಸುಕ್ವಿಂದರ್ ದೇಹವನ್ನು ಪೊಲೀಸ್ ಸರ್ಪಗಾವಲಿನಲ್ಲಿ ಆಂಬುಲೆನ್ಸ್ ಮೂಲಕ ಶವಾಗಾರಕ್ಕೆ ಸ್ಥಳಾಂತರ ಮಾಡಿ, ಮಂಡಿ ಠಾಣೆ ಇನ್ಸ್ಪೆಕ್ಟರ್ ಬಸವರಾಜು ನೇತೃತ್ವದಲ್ಲಿ ದಿನದ 24 ಗಂಟೆಯೂ ಬಂದೋಬಸ್ತ್ ವ್ಯವಸ್ಥೆಗಾಗಿ 3 ಪಾಳಿಯಲ್ಲಿ ಸಿಬ್ಬಂದಿಯನ್ನು ಸ್ಥಳದಲ್ಲಿ…
ವಿಜಯನಗರ ಶೂಟೌಟ್ ಪ್ರಕರಣದ ಹಿನ್ನೆಲೆ: ರೌಡಿಶೀಟರ್ ಬಳಿ ಇತ್ತು ಪರವಾನಗಿ ಪಡೆದ ಗನ್
July 18, 2018ಮೈಸೂರು: ಮೈಸೂರಿನ ಪೊಲೀಸ್ ಠಾಣೆಯೊಂದರಲ್ಲಿ ರೌಡಿಶೀಟ್ ತೆರೆದಿರುವ ವ್ಯಕ್ತಿ, ಮತ್ತೊಂದು ಠಾಣೆಯಿಂದ ಎನ್ಓಸಿ ಪಡೆದು, ಗನ್ ಲೈಸೆನ್ಸ್ ಪಡೆದಿದ್ದ ವಿಷಯ ಇದೀಗ ಬೆಳಕಿಗೆ ಬಂದಿದೆ. ಇತ್ತೀಚೆಗೆ ವಿಜಯನಗರ 4ನೇ ಹಂತದಲ್ಲಿ ಗುಂಡು ಹಾರಿಸಿ, ಟ್ಯಾಕ್ಸಿ ಚಾಲಕನಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಗೌಡ ಕೆಆರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದರೂ ಅದನ್ನು ಮರೆಮಾಚಿ ಕುವೆಂಪುನಗರ ಠಾಣೆಯಿಂದ ಎನ್ಓಸಿ ಪಡೆದು ನಗರ ಪೊಲೀಸ್ ಕಮೀಷ್ನರ್ ಕಚೇರಿಯಲ್ಲಿ ಗನ್ ಲೈಸೆನ್ಸ್ ಗಿಟ್ಟಿಸಿದ್ದಾರೆ ಎಂಬುದು…