ಮೈಸೂರು: ಮೈಸೂರಿನ ವಿವಾದಿತ ವಿಜಯಶ್ರೀಪುರ ಬಡಾವಣೆಯಲ್ಲಿ ನಿರ್ಮಿಸಿರುವ ಮನೆಗಳನ್ನು ತೆರವುಗೊಳಿಸಬೇಕೆಂಬ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕೆಂದು ಅಲ್ಲಿನ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾ ಮಾಡಿದ್ದು, ವಿಜಯಶ್ರೀಪುರ ಬಡಾವಣೆ ನಿವಾಸಿಗಳಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಹಿನ್ನೆಲೆ: ರಾಜ್ಯ ಸರ್ಕಾರವು 1988 ರಲ್ಲಿ ರಾಜ ವಂಶಸ್ಥರಿಗೆ ಸೇರಿದ 94.28 ಎಕರೆ ಭೂಮಿಯನ್ನು ವಶಪಡಿಸಿ ಕೊಂಡಿತ್ತು. ಅದರಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠಕ್ಕೆ ಭೂಮಿ ಮಂಜೂರು ಮಾಡಲಾಗಿದೆ. ಅದೇ ವೇಳೆ 23 ಎಕರೆ ಪ್ರದೇಶದಲ್ಲಿ ವಿಜಯಶ್ರೀಪುರ ಬಡಾವಣೆ ತಲೆ ಎತ್ತಿ, ಅಲ್ಲಿ ನೂರಾರು…