ಮೈಸೂರು: ಚಲನಚಿತ್ರ ನಟ ದಿ.ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಿಸುವಂತೆ ಆಗ್ರಹಿಸಿ ಪಾತಿ ಫೌಂಡೇಷನ್ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ಕಾರ್ಯಕರ್ತರು ಶನಿವಾರ ಭಿಕ್ಷೆ ಬೇಡುವ ಮೂಲಕ ವಿನೂತನ ರೀತಿ ಮೈಸೂರಿನ ಜಗನ್ಮೋಹನ ಅರಮನೆ ಮುಂಭಾಗ ಶನಿವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. ಸರ್ಕಾರ ಕನ್ನಡ ಚಲನಚಿತ್ರ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ವಿಷಯ ದಲ್ಲಿ ಮೀನಾಮೇಷ ಎಣಿಸುತ್ತಿದೆ. ಕೂಡಲೇ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಬಳಗದ…