ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಅಭಾವವಿದ್ದು, ನೇತ್ರಾವತಿಯಲ್ಲೂ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಹೋಟೆಲ್ ಮಾಲೀಕರು ಬಾಳೆಎಲೆ ಮೊರೆ ಹೋಗಿದ್ದಾರೆ. ಮಂಗಳೂರಿನಿಂದ 75 ಕಿಮೀ ದೂರದಲ್ಲಿರುವ ಧರ್ಮಸ್ಥಳಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ, ಆದರೆ ಇಂತಹ ಪವಿತ್ರ ಸ್ಥಳದಲ್ಲಿ ನೀರಿನ ಅಭಾವ ತಲೆದೋರಿದೆ. ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಇತ್ತೀಚೆಗೆ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ಯಾತ್ರಾರ್ಥಿಗಳು ಕೆಲವು ದಿನ ಬಿಟ್ಟು ಬರುವಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮನವಿ…
ನೀರಿನ ಅಭಾವ: ಸಿದ್ಧಗಂಗಾ ಮಠದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸ್ಥಗಿತ
May 21, 2019ತುಮಕೂರು: ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸಿದ್ಧ ಗಂಗಾ ಮಠದ ವಸತಿ ಶಾಲೆಗೆ ವಿದ್ಯಾರ್ಥಿ ಗಳ ದಾಖಲಾತಿ ಸ್ಥಗಿತಗೊಳಿಸಲಾಗಿದೆ ಈಗಾಗಲೇ ನೀರಿನ ಸಮಸ್ಯೆ ಗಂಭೀರ ವಾಗಿದೆ. ಹೊಸದಾಗಿ ದಾಖಲಾಗಲು 8 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮತ್ತಷ್ಟು ಅರ್ಜಿಗಳು ಬಂದರೆ ಅವರನ್ನು ದಾಖಲಿಸಿಕೊಳ್ಳಬೇಕಾಗು ತ್ತದೆ. ನೀರಿನ ಸಮಸ್ಯೆ ಕಾರಣಕ್ಕೆ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಸಾಧ್ಯವಾ ಗುತ್ತಿಲ್ಲ. ಆದ್ದರಿಂದ 15 ದಿನ ಮುಂಚೆಯೇ ಅರ್ಜಿ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವ ನಾಥಯ್ಯ ತಿಳಿಸಿದರು.
ನೀರಿನ ಕೊರತೆ: ಧರ್ಮಸ್ಥಳ ಯಾತ್ರೆ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ
May 18, 2019ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಅಭಾವ ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಳಿಗೂ ಬಿಸಿ ಮುಟ್ಟಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿ ಗಳು ಕೆಲವು ದಿನಗಳ ಮಟ್ಟಿಗೆ ತಮ್ಮ ಯಾತ್ರೆಯನ್ನು ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಮನವಿ ಮಾಡಿದ್ದಾರೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಭಕ್ತರಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನೀರಿನ ಅಭಾವ ಉಂಟಾಗಿದೆ, ಇನ್ನೂ ದೇವ…