ಮೈಸೂರು: ಛಾಯಾಗ್ರಾಹಣ ಕ್ಷೇತ್ರದಲ್ಲಿ ಪ್ರಸ್ತುತ ಬಳಕೆಯಲ್ಲಿರುವ ಉನ್ನತ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಛಾಯಾಗ್ರಾಹಕರು ತಮ್ಮ ಕೌಶಲ್ಯ ಮೆರೆಯಬೇಕು ಎಂದು ವನ್ಯಜೀವಿ ಛಾಯಾಗ್ರಾಹಕ ಎಸ್.ತಿಪ್ಪೇಸ್ವಾಮಿ ಸಲಹೆ ನೀಡಿದರು. ಮೈಸೂರು ಡಿಸ್ಟ್ರಿಕ್ಟ್ ಫೋಟೋಗ್ರಾಫರ್ಸ್ ಅಂಡ್ ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಮೈಸೂರಿನ ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 179ನೇ ವಿಶ್ವಛಾಯಾಗ್ರಹಣ ದಿನಾಚರಣೆ ಹಾಗೂ ಫೋಟೋಗ್ರಫಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 1960ರಲ್ಲಿ ನಾನು ಛಾಯಾಗ್ರಾಹಣ ಆರಂಭಿಸಿದೆ. ಆಗ ಇಂದಿನಷ್ಟು ತಂತ್ರಜ್ಞಾನ ಮುಂದುವರೆದಿರಲಿಲ್ಲ. ಛಾಯಾಗ್ರಾಹಕರು ಇಂತಹ ಕಾರ್ಯಾಗಾರವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ…