ಚಾಮರಾಜನಗರ: ಮಿತಿ ಮೀರಿದ ಪ್ರಮಾಣದಲ್ಲಿ ಏರುತ್ತಿರುವ ಜನಸಂಖ್ಯೆ ಪ್ರಮಾಣವನ್ನು ನಿಯಂತ್ರಣ ಮಾಡದಿದ್ದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಠಿ ಯಾಗಲಿದೆ ಎಂದು ಸಂಸದ ಆರ್. ಧ್ರುವ ನಾರಾಯಣ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ಹಮ್ಮಿ ಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾ ಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಳ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ನಂತರದ ಸ್ಥಾನದಲ್ಲಿದೆ. ಚೀನಾ ಹಾಗೂ ಭಾರತದ…