ಮೈಸೂರು: ತಂಬಾಕು ಸೇವನೆ ಮೃತ್ಯುವಿಗೆ ಆಹ್ವಾನ, ರೈತ ಬಾಂಧವರೇ.. ತಂಬಾಕು ನಿಲ್ಲಿಸಿ, ಸಿರಿಧಾನ್ಯ ಬೆಳೆಯಿರಿ. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಂಟಿ ಆಶ್ರಯದಲ್ಲಿ ಗುರುವಾರ ಮೈಸೂರಿನ ಪ್ರಮುಖ ಬೀದಿಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಜಾಥಾ ಸಂದರ್ಭದಲ್ಲಿ ಈ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿ, ಜನಜಾಗೃತಿ ಉಂಟು ಮಾಡಲಾಯಿತು. ಮೈಸೂರಿನ ಅರಮನೆ ಕೋಟೆ ಆಂಜನೇಯಸ್ವಾಮಿ…
ತಂಬಾಕಿನ ದುಷ್ಪರಿಣಾಮದ ಜಾಗೃತಿ ಅಗತ್ಯ: ನ್ಯಾಯಾಧೀಶ ಎನ್.ಆರ್.ಚೆನ್ನಕೇಶವ ಅಭಿಪ್ರಾಯ, ವಿವಿಧೆಡೆ ತಂಬಾಕು ರಹಿತ ದಿನಾಚರಣೆ
June 1, 2018ಹಾಸನ: ‘ತಂಬಾಕಿನ ಸೇವನೆಯಿಂದ ಉಂಟಾಗುವ ದುಷ್ಪರಿ ಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ ಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎನ್.ಆರ್. ಚೆನ್ನಕೇಶವ ಹೇಳಿದರು. ನಗರದ ಜಿಲ್ಲಾ ಕಾರಾಗೃದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಡೆದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ದೇಶದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿ ದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆ ಯರೂ ಕೂಡ ತಂಬಾಕು ವ್ಯಸನೀಯರಾಗಿ ರುವುದು…
ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಾಗೃತಿ ಜಾಥಾ
June 1, 2018ಹಾಸನ: ನಗರದಲ್ಲಿ ಗುರುವಾರ ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಒರಲ್ ಹೆಲ್ತ್ ಪ್ರೋಗ್ರಾಮ್ ಹಾಗೂ ಹಾಸನಾಂಬ ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಜಗದೀಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಹಾಸನಾಂಬ ದಂತ ವೈದ್ಯಕೀಯ ಕಾಲೇಜು…
ತಂಬಾಕು ಉತ್ಪನ್ನಗಳ ವಿರುದ್ಧ ವಿದ್ಯಾರ್ಥಿ ಜಾಗೃತಿ ಅಭಿಯಾನ
June 1, 2018ಮೈಸೂರು: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಎಸ್ವಿಜಿ ವಿಶ್ವಪ್ರಜ್ಞ ಸಂಯುಕ್ತ ಪÀದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮೈಸೂರಿನ ರೆಡ್ ಎಫ್ಎಂ 93.5 ವತಿಯಿಂದ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್ ಶೇಷಾಚಲ ಅವರು ತಂಬಾಕು ಬೇಡ ಎಂದು ಸಹಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆರಂಭದಲ್ಲಿ ಕುತೂಹಲದಿಂದ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸುವ ವಿದ್ಯಾರ್ಥಿಗಳು, ತದ£ಂತರ ಆ ಕೆಟ್ಟ ಚಟದಿಂದ ಹೊರ ಬರಲಾಗದೆ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಜೀವನವನ್ನು ಕಗ್ಗತ್ತಲೆಯ…
ತಂಬಾಕು ಮುಕ್ತ ಸಮಾಜಕ್ಕೆ ಕಾನೂನಿಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ
June 1, 2018ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ ಕಾನೂನು ನಮ್ಮ ದೇಶದಲ್ಲಿ 2003ರಿಂದ ಜಾರಿಯಲ್ಲಿದೆ. ಆದರೆ, ಧೂಮ ಪಾನ ಮುಕ್ತ ಸಮಾಜದ ಸೃಷ್ಟಿಗೆ ಕಾನೂನು ಗಳಿಗಿಂತ ಸ್ವಯಂ ನಿರ್ಬಂಧವೇ ಹೆಚ್ಚು ಪರಿಣಾಮಕಾರಿ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿ ಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನವು…
ತಂಬಾಕು ಸೇವನೆ ಅನಾಹುತಗಳ ಅರಿವು
June 1, 2018ತಿ.ನರಸೀಪುರ: ವಿದ್ಯಾರ್ಥಿಗಳು ದುಶ್ಚಟಮುಕ್ತರಾಗಿ, ಆರೋಗ್ಯ ದಿಂದ ಬದುಕಲು ಅಗತ್ಯ ಕಾನೂನು ಹಾಗೂ ಆರೋಗ್ಯದ ಬಗ್ಗೆ ತಿಳುವಳಿಕೆ ಪಡೆಯು ವಂತೆ ಹಿರಿಯ ಶ್ರೇಣ ನ್ಯಾಯಾಧೀಶ ಎ. ನಾಗಿರೆಡ್ಡಿ ಕರೆ ನೀಡಿದರು ಪಟ್ಟಣದ ಸರ್ಕಾರಿ ಪಿಯು ಕಾಲೇಜಿ ನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ, ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯ ದಲ್ಲಿ ಗುರುವಾರ ನಡೆದ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, 18…
ತಂಬಾಕು ಸೇವನೆ ಮಾರಕ ರೋಗಗಳಿಗೆ ನಾಂದಿ
June 1, 2018ಹುಣಸೂರು: ನಮ್ಮ ದೇಶದಲ್ಲಿ ತಂಬಾಕು ಸೇವÀನೆಯಿಂದ ಪ್ರತಿ ದಿನ 2500ಕ್ಕೂ ಹೆಚ್ಚು ಜನರು ಸಾಯು ತ್ತಿದ್ದು, ಈ ದುಶ್ಚಟದಿಂದ ಮಾನವ ಶಕ್ತಿ ಕುಂದುತ್ತಿದೆ ಎಂದು ತಾಲೂಕು ಆರೋಗ್ಯಾ ಧಿಕಾರಿ ದೇವತಾಲಕ್ಷ್ಮಿ ವಿಷಾದಿಸಿದರು. ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮುಂದೆ ಇಂದು ಬೆಳಿಗ್ಗೆ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಆರೋಗ್ಯ ಇಲಾಖೆ, ಐಟಿಐ ಹಾಗೂ ಮೆಡಿಕಲ್ ವರ್ಕರ್ ಸಂಯುಕ್ತವಾಗಿ ಏರ್ಪಡಿಸಿದ್ದ ತಂಬಾಕು ರಹಿತ ಅರಿವು ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಂಬಾಕು ಸೇವನೆ ಈಗ ಕೇವಲ…
ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ
June 1, 2018ಎಚ್.ಡಿ.ಕೋಟೆ: ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಯಿತು. ತಾಲೂಕು ವೈದ್ಯಾಧಿಕಾರಿ ರವಿಕುಮಾರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ತಂಬಾಕು ಸೇವನೆಯ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ನಂತಹ ಮಾರಕ ರೋಗಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನ ವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜನಸಾಮಾನ್ಯರು ತಂಬಾಕು ಸೇವನೆಯಿಂದ ದೂರವಿದ್ದು, ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಇದಕ್ಕಾಗಿ ಎಲ್ಲಾ ರೀತಿಯ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಇಲಾಖೆ ಮಾಡುತ್ತಾ…
ತಂಬಾಕು ತ್ಯಜಿಸಿ ಆರೋಗ್ಯಯುತ ಜೀವನ ನಡೆಸಿ
June 1, 2018ಮದ್ದೂರು: ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ, ತಂಬಾಕು ತ್ಯಜಿಸಿ ಆರೋಗ್ಯ ಯುತ ಜೀವನ ನಡೆಸುವಂತೆ ಹಿರಿಯ ಸಿವಿಲ್ ನ್ಯಾ.ಆರ್.ಪಿ.ಗೌಡ ಸಲಹೆ ನೀಡಿದರು. ಪಟ್ಟಣದ ವಕೀಲರ ಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಸೇವಿಸುವ ವ್ಯಕ್ತಿ ತಾನು ಆರೋಗ್ಯ ಹಾಳು ಮಾಡಿಕೊಳ್ಳುವ ಜೊತೆಗೆ ತನ್ನ ಜೊತೆ…
ನಾಳೆ ವಿಶ್ವ ತಂಬಾಕು ದಿನಾಚರಣೆ: ಜಾಥಾ, ಉಪನ್ಯಾಸ
May 30, 2018ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿಶ್ವ ತಂಬಾಕು ದಿನಾಚರಣೆ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಮೇ 31ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಸತ್ರ ನ್ಯಾಯಾಲಯದ ಆವರಣದಲ್ಲಿ ಜಾಥಾ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಿದೆ. ಜಾಥಾ ಕಾರ್ಯಕ್ರಮ ನ್ಯಾಯಾಲಯ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಮುಕ್ತಾಯಗೊಳ್ಳಲಿದೆ. ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸ ಲಾಗಿದೆ ಎಂದು ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ….