ಮೈಸೂರು: ಬೆಳಂಬೆಳಿಗ್ಗೆಯ ಪ್ರಶಾಂತಮಯ ವಾತಾವರಣದಲ್ಲಿ ನೂರಾರು ಮಂದಿ ಹೆಜ್ಜೆ ಹಾಕಿ ಸ್ವಾಮಿ ವಿವೇಕಾನಂದರನ್ನು ಸ್ಮರಿಸಿ ಸಂಭ್ರಮಿಸಿದರು. ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ದಿಕ್ಸೂಚಿ ಭಾಷಣ ಒಂದು ಐತಿಹಾಸಿಕ ಸನ್ನಿವೇಶವಾಗಿದ್ದು, ಇದೀಗ ವಿವೇಕಾನಂದರ ಈ ಮಾತುಗಳನ್ನಾಡಿ 125 ವರ್ಷಗಳೇ ತುಂಬಿವೆ. ಇದರ ಅಂಗವಾಗಿ ಯುವ ಬ್ರಿಗೇಡ್ ಮೈಸೂರು ಘಟಕದ ವತಿಯಿಂದ ಭಾನುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಾಥಾನ್ ನಲ್ಲಿ ಯುವಕರು, ಯುವತಿಯರು, ಹಿರಿ ಯರು ಹಾಗೂ ಕಿರಿಯರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. ಮೈಸೂರು ಅರಮನೆಯ ಕೋಟೆ…
ಮೈಸೂರು
ಕ್ಲೀನ್ ಫೌಂಡೇಷನ್, ಯುವ ಬ್ರಿಗೇಡ್ನಿಂದ ಚಾಮುಂಡಿಬೆಟ್ಟದ ಮೆಟ್ಟಿಲು ಸ್ವಚ್ಛತೆ
June 11, 2018ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಮೆಟ್ಟಿಲುಗಳಲ್ಲಿ ಚೆಲ್ಲಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಕಸವನ್ನು ಭಾನುವಾರ ಮೈಸೂರಿನ ಕ್ಲೀನ್ ಫೌಂಡೇಷನ್ ಮತ್ತು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ದಾರಿಯಲ್ಲಿರುವ ಮಂಟಪಗಳಿಗೆ ಬಣ್ಣ ಬಳಿಯುವ ಮೂಲಕ ಗಮನ ಸೆಳೆದರು. ಪ್ರಸಿದ್ಧ ಪ್ರವಾಸಿ ತಾಣವೂ ಹಾಗೂ ಧಾರ್ಮಿಕ ಕ್ಷೇತ್ರವೂ ಆಗಿರುವ ಚಾಮುಂಡಿಬೆಟ್ಟಕ್ಕೆ ಪ್ರತಿ ದಿನ ಮೆಟ್ಟಿಲುಗಳ ಮೂಲಕ ಹಲವಾರು ಮಂದಿ ಭಕ್ತರು ಮತ್ತು ಪ್ರವಾಸಿಗರು ತೆರಳಲಿದ್ದು, ಮಾರ್ಗ ಮಧ್ಯೆ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲ್ಗಳನ್ನು ಎಸೆದು ಹೋಗುವ ಪರಿಪಾಠವನ್ನು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ…


