ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋ ತ್ಸವದ ಅಂಗವಾಗಿ ಯುವ ಸಂಭ್ರಮ ಕಾರ್ಯಕ್ರಮವನ್ನು ಸೆ.30ರಿಂದ ಅ.5ರ ವರೆಗೆ ಮಾನಸಗಂಗೋತ್ರಿ ಬಯಲು ರಂಗ ಮಂದಿರ ಹಾಗೂ ಯುವ ದಸರಾವನ್ನು ಅ.12ರಿಂದ 17ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮಾನಸಗಂಗೋತ್ರಿಯ ಮೈಸೂರು ವಿವಿ ಮೌಲ್ಯಮಾಪನ ಭವನದಲ್ಲಿ ಯುವ ದಸರಾ ಉಪಸಮಿತಿ ಆಯೋಜಿಸಿದ್ದ ಕಾಲೇಜು ಪ್ರಾಂಶುಪಾಲರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಈ ಯುವ ಸಂಭ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದ…