ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ
ಮೈಸೂರು

ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ

April 25, 2021

ನವದೆಹಲಿ: ಪ್ರಸ್ತುತ ದೇಶದ ಮುಂದ ಕಳೆದ ವರ್ಷ ಕ್ಕಿಂತ ದೊಡ್ಡದಾದ ಸವಾಲಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ರಿಗೂ ಲಸಿಕೆ ಹಾಕಿಸುವ ಮೂಲಕ ಕೋವಿಡ್-19 ಸಾಂಕ್ರಾಮಿಕ ಹಳ್ಳಿ ಗಳಿಗೆ ಹರಡದಂತೆ ನೋಡಿಕೊಳ್ಳಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಕರೆ ಹೇಳಿದ್ದಾರೆ.

ಕೊರೊನಾ ವೈರಸ್ ನಿರ್ವಹಣೆಯಲ್ಲಿ ವಿಶೇಷ ವಾಗಿ ಅರಿವು ಮೂಡಿಸುವಲ್ಲಿ ಪಂಚಾಯಿತಿಗಳ ಪಾತ್ರವನ್ನು ಶ್ಲಾಘಿಸಿರುವ ಪ್ರಧಾನಿ, ಆಗಿಂದಾಗ್ಗೆ ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವತ್ತಾ ಸ್ಥಳೀಯ ನಾಯಕರು ಕಾರ್ಯೋನ್ಮುಖರಾಗುವಂತೆ ಕರೆ ನೀಡಿದ್ದಾರೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಸ್ವಾಮಿತ್ವ ಯೋಜನೆಯಡಿ ಇ-ಆಸ್ತಿ ಕಾರ್ಡ್ ವಿತರಣೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಗ್ರಾಮೀಣ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ಸೋಂಕನ್ನು ತಡೆಗಟ್ಟಲಾಗಿತ್ತು. ಈ ಬಾರಿಯೂ ಅದೇ ರೀತಿ ಸ್ಥಳೀಯ ನಾಯಕತ್ವದಡಿ ಸೋಂಕು ಗ್ರಾಮೀಣ ಪ್ರದೇಶಗಳಿಗೆ ಹರಡದಂತೆ ತಡೆಗಟ್ಟುವ ವಿಶ್ವಾಸವಿದೆ ಎಂದರು.

ಲಸಿಕೆ ಜೊತೆಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸ ಬೇಕಾದ ಅಗತ್ಯವಿದೆ. ದವಾಯಿ ಭಿ, ಕಡೈ ಭಿ (ಔಷಧಿ ಯಂತೆ ನಿರ್ಬಂಧಗಳು) ಪಂಚಾಯಿತಿಗಳ ಮಂತ್ರ ವಾಗಬೇಕು ಎಂದು ಸಲಹೆ ನೀಡಿದರು. ಬಡವರಿಗೆ ನೆರವಾಗಲು ಮೇ ಹಾಗೂ ಜೂನ್ ತಿಂಗಳಲ್ಲಿ ಉಚಿತ ವಾಗಿ ಪಡಿತರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ 80 ಕೋಟಿ ಜನರಿಗೆ ನೆರವಾಗಲಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಯಾವುದೇ ಕುಟುಂಬ ಹಸಿವಿನಿಂದ ನರಳದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ಹೇಳಿದರು.

 

 

Translate »