ಅತಿವೃಷ್ಠಿ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿ
ಹಾಸನ

ಅತಿವೃಷ್ಠಿ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿ

August 4, 2018

ಹಾಸನ:  ‘ಜಿಲ್ಲೆಯ ವಿವಿಧೆಡೆ ಅತಿವೃಷ್ಠಿಯಿಂದ ಸಾಕಷ್ಟು ಹಾನಿ ಸಂಭವಿ ಸಿದ್ದು, ರಾಷ್ಟೀಯ ಪ್ರಕೃತಿ ವಿಕೋಪ ನಿಧಿ ಮಾನದಂಡದಂತೆ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅನುಪಾಲನೆ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅತಿವೃಷ್ಠಿ ಹಿನ್ನೆಲೆಯಲ್ಲಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಬೆಳೆ, ಮನೆ, ಜಾನುವಾರು, ಜೀವಹಾನಿಗೆ ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ಕಟ್ಟಡಗಳು, ರಸ್ತೆಗಳು, ಚರಂಡಿಗಳ ದುರಸ್ತಿ, ಕುಡಿ ಯುವ ನೀರು, ವಿದ್ಯುತ್ ಸಂರ್ಪಕಗಳನ್ನು ಸರಿಪಡಿಸುವ ಕಾರ್ಯ ಕೈಗೊಳ್ಳಬಹುದಾ ಗಿದೆ ಎಂದರು. ಮಳೆಯಿಂದ ಹಾನಿಗೀ ಡಾಗಿರುವ ಅಂಗನವಾಡಿ, ಆಸ್ಪತ್ರೆ, ಶಾಲಾ ಕಟ್ಟಡಗಳು, ರಸ್ತೆ, ಚರಂಡಿಗಳನ್ನು ಗುರುತಿಸಿ ಅಂದಾಜು ವೆಚ್ಚ ಪಟ್ಟಿ ಸಿದ್ದಪಡಿಸಿ ಕಾಮ ಗಾರಿ ಕೈಗೊಳ್ಳಬೇಕು. ಮನೆ, ಕೊಟ್ಟಿಗೆ, ಜಮೀನುಗಳಿಗೆ ಉಂಟಾಗಿರುವ ಹಾನಿ ಯನ್ನು ಭರಿಸಿ ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿಯವರು ಜನತಾ ದರ್ಶನ ದಲ್ಲಿ ಸ್ವೀಕರಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ ಕಳಿಸಲಾಗುವ ಪತ್ರಗಳನ್ನು ಮೊದಲ ಆದ್ಯತೆ ಮೇರೆಗೆ ಕ್ರಮಕೈಗೊಳ್ಳಬೇಕು. ಜಿಲ್ಲೆಯಲ್ಲಿ ಎಲ್ಲಾ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ದೊರೆಯ ಬೇಕು. ಕೃಷಿ ತೋಟಗಾರಿಕಾ ಸೌಲಭ್ಯ ಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೇಳಿದರು.

50-53, 94A,B,C ಅರ್ಜಿಗಳ ತ್ವರಿತ ವಿಲೇವಾರಿಯಾಗಬೇಕು ಸರ್ವೇ ಕಾರ್ಯಗಳನ್ನು ಇನ್ನಷ್ಟು ಚುರುಕಿನಿಂದ ನಡೆಸಬೇಕು. ಗಂಗಾ ಕಲ್ಯಾಣ ಯೋಜನೆ ಯಡಿ ಕೊಳವೆ ಬಾವಿ ಕೊರೆಸುವ ಕಾಮಗಾರಿ ಕಾಲಮಿತಿಯೊಳಗೆ ಮುಗಿಸಬೇಕು ಎಂದರು. ವಿವಿಧ ಇಲಾಖೆಗಳಡಿ ಸಮುದಾಯ ಭವನಗಳಿಗಿಂತ ಮೊದಲ ಆದ್ಯತೆಯನ್ನು ವಿದ್ಯಾರ್ಥಿಗಳ ವಸತಿನಿಲಯ ನಿರ್ಮಾಣಕ್ಕೆ ನೀಡಬೇಕಾಗಿದೆ. ಆದಷ್ಟು, ಶೀಘ್ರವಾಗಿ ಸಮಾಜ ಕಲ್ಯಾಣ, ಹಿಂದು ಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ಶಾಲೆ ಮತ್ತು ವಸತಿನಿಲಯಗಳಿಗೆ ನಿವೇಶನಗಳನ್ನು ಗುರುತಿಸಿ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಮಾತ ನಾಡಿ, ಎಲ್ಲಾ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯ. ಸರ್ಕಾರದ ಸಾಮಾಜಿಕ ಏಳಿಗೆಯ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿ ಸಿಬ್ಬಂದಿಗಳು ಬದ್ಧತೆಯಿಂದ, ಆಸಕ್ತಿಯಿಂದ ಹಾಗೂ ಪ್ರಾಮಾಣಿಕತೆ ಯಿಂದ ತೊಡಗಿಕೊಳ್ಳಬೇಕು ಎಂದರು.

ಗ್ರಾಮೀಣ ಮೂಲ ಸೌಕರ್ಯ ಅಭಿ ವೃದ್ಧಿಯಾಗಬೇಕು. ಸ್ವಚ್ಚತೆ, ಕುಡಿಯುವ ನೀರು ಪೂರೈಕೆ ಬಗ್ಗೆ ಗ್ರಾಮ ಪಂಚಾಯಿತಿಗಳು ಇನ್ನಷ್ಟು ಹೆಚ್ಚಿನ ಗಮನ ಹರಿ ಬೇಕು. ಎಲ್ಲಾ ಗ್ರಾಮೀಣ ವಿದ್ಯಾರ್ಥಿ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಸಂಜೆ ಉಳಿದು ಕೊಳ್ಳುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಮಾತ್ರ ಹಣ ಪಾವತಿಯಾಗಬೇಕು. ನಕಲಿ ಲೆಕ್ಕಗಳಿಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಧಿಕಾರಿ ಅವರು, ಎಲ್ಲಾ ಹಾಸ್ಟೆಲ್‍ಗಳಿಗೆ ಸಮೀಪದ ಗ್ರಾಮಲೆಕ್ಕಿಗರು ಮತ್ತು ಕಂದಾಯ ಪರಿವೀಕ್ಷಕರು ಒಂದೊಂದು ದಿನ ಭೇಟಿ ನೀಡಿ ಸಂಜೆವರೆಗೂ ಪರಿಶೀಲಿಸಿ ವಾಸ್ತವಾಂಶಗಳ ಬಗ್ಗೆ ವರದಿ ನೀಡಲು ಆದೇಶ ಹೊರಡಿಸಲಾಗುವುದು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಲಕ್ಷ್ಮಿ ಕಾಂತ್ ರೆಡ್ಡಿ, ಡಾ.ಹೆಚ್.ಎಲ್.ನಾಗ ರಾಜು, ಪ್ರೊಬೇಷನರಿ ಐಎಎಸ್ ಅಧಿಕಾರಿ ಎಂ.ಪ್ರಿಯಾಂಕ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಶಿಕ್ಷಣ ಇಲಾಖೆಯಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಸಮಪರ್ಕವಾಗಿ ಜಾರಿಯಾಗಬೇಕು. ಪ್ರಾಥಮಿಕ, ಸಮುದಾಯ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯದಲ್ಲಿ ಗುಣಮಟ್ಟ ಇನ್ನಷ್ಟು ವೃದ್ಧಿಯಾಗಬೇಕು. ಕಾಯಕಲ್ಪ ಯೋಜನೆ ಎಲ್ಲಾ ಆಸ್ಪತ್ರೆಗಳಲ್ಲಿ ಅನುಷ್ಠಾನವಾಗಬೇಕು. ತಾಯಿ ಮರಣ ಪ್ರಮಾಣ ಕಡಿಮೆಯಾಗಬೇಕು – ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ

Translate »