ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಮೈಸೂರು

ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

November 22, 2018

ಮಂಡ್ಯ: ಬೈಕ್, ಕಾರು ಹಾಗೂ ಟೆಂಪೆÇೀ ಟ್ರಾವೆಲರ್ ನಡುವೆ ಸರಣಿ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ತಾಲೂಕಿನ ಸಿದ್ದಯ್ಯನ ಕೊಪ್ಪಲು ಗೇಟ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಕಟ್ಟಡ ಕಾರ್ಮಿಕರಾದ ಮಾದೇಶ್ (45), ಜೇಮ್ಸ್ (30) ಮೃತರು. ಎಂದಿನಂತೆ ಇಬ್ಬರೂ ಗಾರೆ ಕೆಲಸಕ್ಕೆ ಬೈಕ್‍ನಲ್ಲಿ ಹೋಗು ತ್ತಿದ್ದರು. ಈ ವೇಳೆ ಸಿದ್ದಯ್ಯನಕೊಪ್ಪಲು ಗೇಟ್ ಬಳಿ ಬೆಂಗ ಳೂರು-ಮೈಸೂರು ಹೆದ್ದಾರಿಯಲ್ಲಿ ಎದುರಿನಿಂದ ಬಂದ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಪಕ್ಕದಲ್ಲಿ ಚಲಿ ಸುತ್ತಿದ್ದ ಟೆಂಪೆÇೀ ಟ್ರಾವೆಲರ್‍ಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ ನೋರ್ವ ಟೆಂಪೆÇೀ ಟ್ರಾವೆಲರ್ ಚಕ್ರಕ್ಕೆ ಸಿಲುಕಿ ಮೃತಪಟ್ಟರೆ, ಇನ್ನೋರ್ವ ರಸ್ತೆ ಮೇಲೆ ಬಿದ್ದು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿದು, ಮಂಡ್ಯ ಗ್ರಾಮಾಂತರ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಜರುಗಿಸಿದ್ದಾರೆ. ಸರಣಿ ಅಪಘಾತದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 5 ಕಿ.ಮೀವರೆಗೂ ಟ್ರಾಫಿಕ್ ಜಾಮ್ ಆಗಿ, ಸಂಚಾರಕ್ಕೆ ಅಡ್ಡಿ ಉಂಟಾಯಿತು.

Translate »