ಎರಡು ಕ್ಷೇತ್ರಗಳ ಉಪ ಚುನಾವಣೆ, ಅಭ್ಯರ್ಥಿ ಕಣಕ್ಕಿಳಿಸುವುದು ವ್ಯರ್ಥ

ಬೆಂಗಳೂರು,ನ.22-ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ ಸ್ವಾಮಿ, ಮಂಡ್ಯ, ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪ ಚುನಾವಣೆಗಳ ಸೋಲಿನ ಬಳಿಕ ನಮಗೆ ಮತ್ತಷ್ಟು ಸವಾಲು ಎದುರಾಗಿದೆ. ಕಾರ್ಯಕರ್ತರು ಹುರುಪಿ ನಿಂದ ಪಕ್ಷಕ್ಕೆ ಪುನಶ್ಚೇತನ ನೀಡಲು ಸಿದ್ಧರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾ ವಣೆಗಳಲ್ಲಿ ವ್ಯರ್ಥ ಕಸರತ್ತು ಹಾಕುವುದು ಸರಿಯಲ್ಲ, ಉಪ ಚುನಾವಣೆಗಳಲ್ಲಿ ಅಭ್ಯರ್ಥಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು. ಜೆಡಿಎಸ್ ಪಕ್ಷ ಸಂಘ ಟನೆ ಚೆನ್ನಾ ಗಿಯೇ ಇದೆ. ಉಪ ಚುನಾವಣೆಗಳಲ್ಲಿ ಈಗ ಬಿಜೆಪಿಯ ವಿಧಾನವೇ ಬೇರೆ ಇದೆ. ಇಂಥ ಸಂದರ್ಭದಲ್ಲಿ ನಾವು ಉಪಚುನಾವಣೆ ಗೆಲ್ಲೋದು ಕಷ್ಟವೇ ಆಗಿದೆ. ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಯಲ್ಲಿ ಹಣ ಹಾಗೂ ಅಧಿಕಾರ ಬಲ ದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಪರೋಕ್ಷವಾಗಿ ಅವರು ಹೇಳಿದರು.