ಹೆಬ್ಬಾಲೆಯಲ್ಲಿ ವೈಭವದ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವ
ಕೊಡಗು

ಹೆಬ್ಬಾಲೆಯಲ್ಲಿ ವೈಭವದ ಶ್ರೀ ಬನಶಂಕರಿ ಅಮ್ಮನವರ ಜಾತ್ರೋತ್ಸವ

December 8, 2018

ಹೆಬ್ಬಾಲೆ: ಉತ್ತರ ಕೊಡಗಿನ ಗಡಿ ಗ್ರಾಮವಾದ ಹೆಬ್ಬಾಲೆಯಲ್ಲಿ ಶುಕ್ರವಾರ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ ಹಾಗೂ ಜಾತ್ರೋ ತ್ಸವವು ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಐತಿಹಾಸಿಕ ಹಿನ್ನೆಲೆಯುಳ್ಳ ಗ್ರಾಮದ ಶಕ್ತಿ ದೇವತೆ ಶ್ರೀ ಬನಶಂಕರಿ ಹಬ್ಬದ ಅಂಗ ವಾಗಿ ಅಮ್ಮನವರ ಸನ್ನಿಧಿಯಲ್ಲಿ ಬೆಳಿಗ್ಗೆ ಯಿಂದಲೇ ಗಣಪತಿ ಪೂಜೆ, ಪುಣಾಹಃ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ಮೃತ್ಯುಂಜಯ ಹೋಮ, ನವ ಗ್ರಹ ಪೂಜೆ ಮಹಾ ಮಂಗಳಾರತಿ ಸೇರಿ ದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣ ಮೂರ್ತಿ ಅವರ ನೇತೃತ್ವದಲ್ಲಿ ಜರುಗಿದವು.

ಮಧ್ಯಾಹ್ನ 12.30 ಗಂಟೆಗೆ ಶ್ರೀಅಮ್ಮನ ವರಿಗೆ ಕ್ಷೀರಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ನೆರವೇರಿಸಲಾಯಿತು. ಸಂಜೆ 4 ಗಂಟೆಗೆ ಕ್ಷೀರಾಭಿಷೇಕ, ಗಣಪತಿ ಪೂಜೆ ನಂತರ ಶ್ರೀ ಬನಶಂಕರಿ ದೇವಿ ಯನ್ನು ವಿವಿಧ ಪುಷ್ಪಗಳಿಂದ ಹಾಗೂ ಆಭರಣಗಳಿಂದ ಅಲಂಕರಿಸಲಾಯಿತು. ಗ್ರಾಮದಲ್ಲಿ ದೇವಿಯ ವಾರ್ಷಿಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಶ ಹಾಗೂ ರಾತ್ರಿ 8 ಗಂಟೆಗೆ ಅಗ್ನಿಕುಂಡ ಸ್ಥಾಪಿಸು ವುದು ಸೇರಿದಂತೆ ವಿವಿಧ ಪೂಜಾ ಕೈಂಕ ರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಯಜಮಾನ್ ಎಚ್.ಎನ್.ಬಸವರಾಜು ಮತ್ತು ಕಾರ್ಯದರ್ಶಿ ಎಚ್.ಪಿ.ರಾಜು ಹಾಗೂ ಸಮಿತಿ ಸದಸ್ಯರ ನೇತೃತ್ವದಲ್ಲಿ ನಡೆದವು. ಹಬ್ಬದ ಅಂಗವಾಗಿ ಗ್ರಾಮ ವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು.

ಇಡೀ ಗ್ರಾಮವೇ ಹಬ್ಬದ ಅಂಗವಾಗಿ ನವವಧುವಿನಂತೆ ಶೃಂಗಾರಗೊಂಡಿತ್ತು. ರಾತ್ರಿ ಶ್ರೀಬನಶಂಕರಿ ಅಮ್ಮನವರ ದೇವ ಸ್ಥಾನ ಸಮಿತಿ, ಶ್ರೀಬಸವೇಶ್ವರ ಸಮಿತಿ, ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಬಳಿಯಿಂದ ವಿದ್ಯುತ್ ಅಲಂಕೃತ ಮಂಟಪದಲ್ಲಿ ಶ್ರೀ ಬನಶಂಕರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ನಂತರ ವಾದ್ಯಗೋಷ್ಠಿಗಳೊಂದಿಗೆ ರಾತ್ರಿ 10 ಗಂಟೆಗೆ ದೇವಿಯ ಉತ್ಸವವನ್ನು ಮೆರ ವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಯಿತು.

ಹರಕೆ ಹೊತ್ತ ಭಕ್ತಾಧಿಗಳು 9 ದಿವಸ ಉಪವಾಸ ವ್ರತ ಆಚರಿಸಿ ಉತ್ಸವಗ ಳೊಂದಿಗೆ ಮೆರವಣಿಗೆಯಲ್ಲಿ ತಾಯಿಯ ಬನಕ್ಕೆ ಬಂದು ದೇವಸ್ಥಾನದ ಮುಂದೆ ಹಾಕಿ ರುವ ಅಗ್ನಿಕುಂಡವನ್ನು ಹಾಯ್ದು ದೇವಿಯ ದರ್ಶನ ಪಡೆದು ಪುನೀತರಾದರು.

ದೇವಿಯ ಉತ್ಸವದೊಂದಿಗೆ ಗ್ರಾಮದ ಇತರೆ ಭಾಗಗಳಿಂದ ಹೊರಟ ಏಳು ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ಮೆರುಗು ನೀಡುದವು. ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡು ಗಳ ಪ್ರದರ್ಶನ ಹಾಗೂ ಬಾಣ ಬಿರುಸು ಗಳ ಚಿತ್ತಾರ ನೋಡುಗರ ಕಣ್ಮನ ಸೆಳೆಯಿತು.

ಈ ಹಬ್ಬದಲ್ಲಿ ಮೈಸೂರು, ಹಾಸನ ಜಿಲ್ಲೆಗಳ ಗಡಿಭಾಗದ ಜನರು ಹಾಗೂ ಸುತ್ತ ಮುತ್ತಲ ಗ್ರಾಮಗಳಿಂದ ಸಾವಿರಾರೂ ಮಂದಿ ಪಾಲ್ಗೊಂಡಿದ್ದರು. ಹಬ್ಬದ ಸಂದರ್ಭ ಗ್ರಾಮದಲ್ಲಿ ಸೇರಿದ್ದ ಜಾತ್ರೆಯು ಗ್ರಾಮೀಣ ಸಂಸ್ಕøತಿಯನ್ನು ಪ್ರತಿಬಿಂಬಿಸಿತು. ಹಬ್ಬ ಅಂಗವಾಗಿ ಡಿವೈಎಸ್ಪಿ ಮುರುಳೀಧರ್, ಸಿಐ ಕ್ಯಾತೇಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಿದ್ದರು.

Translate »