ಮೈಸೂರಿಗೆ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ

ಮೈಸೂರು: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬನ್ಸೂರಿ ಸ್ವರಾಜ್ ಮತ್ತು ಅವರ ಸ್ನೇಹಿತೆಯರು ಇಂದು ಅರಮನೆ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಸಂಸದ ಪ್ರತಾಪ್ ಸಿಂಹ ಬನ್ಸೂರಿ ಅವರಿಗೆ ಮೈಸೂರು ದರ್ಶನ ಮಾಡಿಸುವುದರ ಜೊತೆ ಒಡೆಯರ್ ಇತಿಹಾಸವನ್ನು ಪರಿಚಯಿಸಿದ್ದಾರೆ.

ಅರಮನೆ, ಮೃಗಾಲಯ ಸೇರಿದಂತೆ ಪ್ರೇಕ್ಷಣ ಯ ಸ್ಥಳಗಳಿಗೆ ಸುಷ್ಮಾ ಪುತ್ರಿ ಭೇಟಿ ನೀಡಿ ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಇದೇ ವೇಳೆ ಸಂಜೆ ಪ್ರತಾಪ್ ಸಿಂಹ ಕೆಲ ನಿಮಿಷ ಫೇಸ್‍ಬುಕ್ ಲೈವ್ ಬಂದು ತಾವು ಬನ್ಸೂರಿ ಸ್ವರಾಜ್ ಮತ್ತು ತಮ್ಮ ಮಗಳೊಂದಿಗೆ ಅರಮನೆಯ ವಿದ್ಯುದೀಪಾಲಂಕಾರ ವೀಕ್ಷಣೆ ಮಾಡುತ್ತಿದ್ದೇವೆ ಅಂತಾ ತಿಳಿಸಿದ್ದಾರೆ. ಮೈಸೂರು ಅರಮನೆ ನಾಡಿನ ಪರಂಪರೆ, ಸಂಸ್ಕೃತಿಯನ್ನು ಕಂಡು ಬನ್ಸೂರಿ ಸ್ವರಾಜ್ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.