ಕೆರೆಯಲ್ಲಿ ಮುಳುಗಿ ಯುವಕ ಸಾವು
ಹಾಸನ

ಕೆರೆಯಲ್ಲಿ ಮುಳುಗಿ ಯುವಕ ಸಾವು

December 1, 2018

ಹಾಸನ:  ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮುತ್ತಯ್ಯ ಎಂಬುವರ ಪುತ್ರ ಮೋಹನ್(19) ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಗ್ರಾಮದ ಮಹೇಶ್ ಎಂಬುವವರ ಕಾಫಿ ತೋಟದ ಕೆರೆಯಲ್ಲಿ ಈಜಲು ತೆರಳಿದಾಗ ಈ ದುರ್ಘಟನೆ ನಡೆದಿದೆ. ಅಗ್ನಿಶಾಮಕದಳ ಹಾಗೂ ಗ್ರಾಮಾಂತರ ಪೆÇಲೀಸರು ಸತತ 4 ತಾಸು ಕಾರ್ಯಾಚರಣೆ ನಡೆಸಿ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಶವವನ್ನು ಮರಣೋತ್ತಾರ ಪರೀಕ್ಷೆಗಾಗಿ ತಾಲೂಕು ಕಾಫರ್ಡ್ ಆಸ್ಪತ್ರೆಗೆ ಸಾಗಿಸಲಾಗಿದೆ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Translate »