ಬೆಂಗಳೂರು: ಕೋವಿಡ್-19 ನಿಯಂ ತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆ ಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.
ಶ್ರೀರಾಮುಲು ನಿರ್ವಹಿಸುತ್ತಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಗೆ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದು ನಾಳೆ ಅಂತಿಮ ಆದೇಶ ಪ್ರಕಟಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೊರೊನಾ ನಿರ್ವಹಣೆಯಲ್ಲಿ ಸಂವ ಹನ ಕೊರತೆ ಇದೆ ಎಂಬ ದೂರುಗಳು ಕೇಳಿಬರುತ್ತಿದ್ದು ಹೀಗಾಗಿ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಒಬ್ಬರಿಗೇ ನೀಡಲು ನಿರ್ಧರಿಸಲಾಗಿದೆ. ಇನ್ನು ಸುಧಾಕರ್ ಅವರು ವೈದ್ಯರೂ ಆಗಿರುವುದರಿಂದ ಎರಡು ಖಾತೆಯನ್ನು ಅವರಿಗೆ ನೀಡಲು ನಿರ್ಧರಿಸಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ ಅವರು ಪಿಡಬ್ಲ್ಯೂಡಿ ಜೊತೆಗೆ ಸಮಾಜ ಕಲ್ಯಾಣ ಖಾತೆಯನ್ನು ನಿಭಾಯಿಸುತ್ತಿದ್ದರು. ಇದೀಗ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಶ್ರೀ ರಾಮುಲು ಅವರಿಗೆ ನೀಡಲಾಗುತ್ತದೆ.