ಆರೋಪಿಗಳಿಗೆ ನ್ಯಾಯಾಂಗ ಬಂಧನ ಫೆ.26ರವರೆಗೆ ವಿಸ್ತರಣೆ
ಮೈಸೂರು

ಆರೋಪಿಗಳಿಗೆ ನ್ಯಾಯಾಂಗ ಬಂಧನ ಫೆ.26ರವರೆಗೆ ವಿಸ್ತರಣೆ

February 13, 2019

ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಸಂಭವಿಸಿದ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಮಂಗಳವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಫೆ.26ರವರೆಗೆ ವಿಸ್ತರಿಸಿ, ಆದೇಶ ನೀಡಿದರು. ಪ್ರಕರಣದಲ್ಲಿ ಬಂಧಿತರಾಗಿರುವ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ದೊಡ್ಡಯ್ಯ ಮತ್ತು ಮಾದೇಶ್‍ರನ್ನು ಮೈಸೂರಿನ ಕೇಂದ್ರ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಸವರಾಜು ವಿಚಾರಣೆ ನಡೆಸಿದರು.

ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಪರ ಜಾಮೀನು ಅರ್ಜಿ ಸಲ್ಲಿಸಿದ್ದು, ಅವರ ಪರ ವಿರಾಜಪೇಟೆಯ ಮೂವರು ವಕೀಲರು ಇಂದು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆದರೆ ನ್ಯಾಯಾಧೀಶರಿಗೆ ಅಂಚೆ ಮೂಲಕ ಅರ್ಜಿ ಕಳುಹಿಸಿದ್ದರು. ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಓದಲಾಯಿತು. ಈ ವೇಳೆ ನ್ಯಾಯಾಧೀಶರು ಉಳಿದ ಮೂವರು ಆರೋಪಿಗಳ ಪರ ವಕೀಲರ ನೇಮಕ ಕುರಿತು ಪ್ರಶ್ನಿಸಿದರು. ಇದಕ್ಕೆ ಅವರು, ಬೆಂಗಳೂರಿನ ದುರ್ಗಾಪ್ರಸಾದ್ ಎಂಬ ವಕೀಲರನ್ನು ನೇಮಕ ಮಾಡಿಕೊಂಡಿದ್ದೇವೆ. ಬುಧವಾರ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಅರ್ಜಿ ಸಲ್ಲಿಸುವರು ಎಂದು ತಿಳಿಸಿದರು. ಬಳಿಕ ನಾಯಾ ಧೀಶರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ, ಆದೇಶಿಸಿದರು.

Translate »