ಫೆ.23ರಿಂದ ಬೃಹತ್ ಉದ್ಯೋಗ ಮೇಳ:  ಅಗತ್ಯ ಸಿದ್ಧತೆಗೆ ಸಚಿವ ರೇವಣ್ಣ ಸೂಚನೆ
ಹಾಸನ

ಫೆ.23ರಿಂದ ಬೃಹತ್ ಉದ್ಯೋಗ ಮೇಳ: ಅಗತ್ಯ ಸಿದ್ಧತೆಗೆ ಸಚಿವ ರೇವಣ್ಣ ಸೂಚನೆ

February 19, 2019

ಹಾಸನ: ನಗರದಲ್ಲಿ ಫೆ.23 ಮತ್ತು 24ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸುತ್ತಿದ್ದು, ಅಗತ್ಯ ಸಿದ್ಧತೆ ಮಾಡಿ ಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉದ್ಯೋಗ ಮೇಳ ಪೂರ್ವ ಭಾವಿ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, 2 ದಿನ ಗಳ ಉದ್ಯೋಗ ಮೇಳದಲ್ಲಿ 20 ಸಾವಿರ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಉತ್ತಮ ರೀತಿ ಪ್ರಚಾರ ನಡೆಸಿರಿ. ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಎಂದು ಉದ್ಯೋಗ ವಿನಿಮಯ ಅಧಿಕಾರಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.

ಯುವ ಸಮುದಾಯಕ್ಕೆ ಹಾಗೂ ಸಂಕಷ್ಟದಲ್ಲಿರುವವರಿಗೆ ಉದ್ಯೋಗ ದೊರಕಿಸಿಕೊಡುವುದು ಮೇಳದ ಮೂಲ ಆಶಯ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಚಿಕ್ಕಮಗ ಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ನಿರ್ದೇಶನ ನೀಡಿದರು.

ಉದ್ಯೋಗ ಮೇಳದಲ್ಲಿ ಹೆಚ್ಚಿನ ಕಂಪನಿಗಳು ಪಾಲ್ಗೊಳ್ಳುವಂತಾಗ ಬೇಕು. ಕನಿಷ್ಠ ಶಿಕ್ಷಣದಿಂದ ಗರಿಷ್ಠ ಶಿಕ್ಷಣದವರೆಗಿನ ಎಲ್ಲರಿಗೂ ಉದ್ಯೋಗಾವಕಾಶಗಳು ಲಭ್ಯವಾಗುವ ರೀತಿಯ ಉದ್ಯೋಗ ಮೇಳ ಇದಾಗಿರಬೇಕು. ಸುದ್ದಿ ಮಾಧ್ಯಮಗಳು, ಹೆದ್ದಾರಿ ಫಲಕಗಳು ಹಾಗೂ ಆನ್‍ಲೈನ್ ಮೂಲಕವೂ ಸಾರ್ವಜನಿಕರಿಗೆ ಮಾಹಿತಿ ನೀಡಿ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳ ಯಶಸ್ಸಿಗೆ ಶ್ರಮಿಸಬೇಕು ಎಂದರು.

ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕು ಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಆಸಕ್ತ ನಿರುದ್ಯೋಗಿಗಳು ಹಾಸನಕ್ಕೆ ಬರಲು ಅನುಕೂಲ ಕಲ್ಪಿಸಿಕೊಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಗಳಿಬ್ಬರೂ ಗಮನ ಹರಿಸಬೇಕು ಎಂದು ರೇವಣ್ಣ ಸೂಚಿಸಿದರು.
ಊಟದ ವ್ಯವಸ್ಥೆ: ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾ ಸಕ್ತರು ಮತ್ತು ಉದ್ಯೋಗದಾತ ಸಂಸ್ಥೆಗಳ ಪ್ರತಿನಿಧಿಗಳಿಗೆ 2 ದಿನವೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಬೇಕಿದೆ. ಈಗಾಗಲೇ ನಿರ್ಮಿಸಿರುವ ಮಳಿಗೆಗಳನ್ನು ಉಳಿಸಿಕೊಂಡು ಉದ್ಯೋಗ ಮೇಳಕ್ಕೆ ಬಳಸಬಹುದಾಗಿದೆ. ಸ್ಥಳೀಯ ಖಾಸಗಿ ಕಾರ್ಖಾನೆಗಳು, ಕಂಪನಿ ಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸುವಂತೆ ಉದ್ಯೋಗ ವಿನಿಮಯ ಅಧಿಕಾರಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಕೈಗಾ ರಿಕಾ ಇಲಾಖೆ ಜಂಟಿ ನಿರ್ದೇಶಕರಿಗೆ ಸಚಿವರು ಸೂಚಿಸಿದರು.

ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳದ ಬಗ್ಗೆ ಅಗತ್ಯ ಪ್ರಚಾರ ಕೈಗೊಳ್ಳು ವುದಾಗಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಭರವಸೆ ನೀಡಿದರು. ಈ ವೇಳೆ ಜಿಪಂ ಸಿಇಒ ಹೆಚ್.ಸಿ. ಪುಟ್ಟಸ್ವಾಮಿ, ಅಪರ ಜಿಲ್ಲಾಧಿಕಾರಿ ವೈಶಾಲಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Translate »